ಬಂಟ್ವಾಳ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿಶ್ವಹಿಂದು ಪರಿಷದ್ ಮತ್ತು ಬಜರಂಗದಳ ವತಿಯಿಂದ ಬಂಟ್ವಾಳದ ನಗರ ಎಸ್.ಐ. ಅವಿನಾಶ್ ಮೂಲಕ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಶಾಲೆ, ಕಾಲೇಜು ಬಿಡುವ ವೇಳೇ ಹುಡುಗಿಯರನ್ನು ಚುಡಾಯಿಸುವ ಕುರಿತು ತನಿಖೆ ನಡೆಸುವಂತೆ ಆಗ್ರಹಿಸಿತು. ಭಜರಂಗದಳ ಜಿಲ್ಲಾ ಸಹಸಂಚಾಲಕ್ ಗುರುರಾಜ್ ಬಂಟ್ವಾಳ್, ಬಂಟ್ವಾಳ ಪ್ರಖಂಡ ಸಹಸಂಚಾಲಕ್ ಸಂತೋಷ್ ಸರಪಾಡಿ, ದೀಪಕ್ ಅಜೆಕಳ, ಹರೀಶ ಅಮ್ಟಾಡಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅತ್ಯಾಚಾರ ಘಟನೆ: ಕ್ರಮಕ್ಕೆ ವಿಹಿಂಪ, ಬಜರಂಗದಳ ಒತ್ತಾಯ, ಹುಡುಗಿಯರ ಚುಡಾಯಿಸುವ ಇತರ ಘಟನೆಗಳ ಕುರಿತು ನಿಗಾ ಇರಿಸಲು ಮನವಿ"