ಯಕ್ಷಗಾನದ ಹಿರಿಯ ಭಾಗವತ ಪದ್ಯಾಣ ಗಣಪತಿ ಭಟ್ ಇನ್ನಿಲ್ಲ

ಮರೆಯಾದ ತೆಂಕುತಿಟ್ಟಿನ ಗಾನಗಂಧರ್ವ, ಎಸ್ಪಿಬಿ ಅವರಿಂದಲೇ ಪ್ರಶಂಸೆಗೊಳಗಾಗಿದ್ದ ಯಕ್ಷಗಾನದ ಪ್ರತಿಭೆ

EDITED AND OWNED BY – HARISH MAMBADY. For Advertisements, News Contact Watsapp No: 9448548127

ಪುತ್ತೂರು: ತೆಂಕುತಿಟ್ಟಿನ ಹಿರಿಯ ಭಾಗವತರಾದ ಪದ್ಯಾಣ ಗಣಪತಿ ಭಟ್ (67) ಇನ್ನಿಲ್ಲ. ಕಲ್ಮಡ್ಕದಲ್ಲಿರುವ ಸ್ವಗೃಹದಲ್ಲಿ ಮಂಗಳವಾರ ಬೆಳಗ್ಗೆ 7.45ಕ್ಕೆ ಹೃದಯಾಘಾತದಿಂದ ನಿಧನ ಹೊಂದಿದರು. ಅವರು ಪತ್ನಿ, ಇಬ್ಬರು ಪುತ್ರರು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಸುಳ್ಯ ತಾಲೂಕು ಕಲ್ಮಡ್ಕ ಗ್ರಾಮದ ಗೋಳ್ತಾಜೆಯಲ್ಲಿ 1955 ಜ.21ರಂದು ಪದ್ಯಾಣ ತಿರುಮಲೇಶ್ವರ ಭಟ್ ಮತ್ತು ಸಾವಿತ್ರಿ ದಂಪತಿಯ ಮೂರನೇ ಮಗನಾಗಿ ಜನಿಸಿದ ಅವರು ಮೂಲತಃ ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಪದ್ಯಾಣ ಕುಟಂಬದವರು. ಬಾಲ್ಯದಲ್ಲೇ ಯಕ್ಷಗಾನದತ್ತ ಆಸಕ್ತರಾಗಿದ್ದ ಅವರು ಧರ್ಮಸ್ಥಳದಲ್ಲಿ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ಗುರು ಮಾಂಬಾಡಿ ನಾರಾಯಣ ಭಾಗವತರ ಬಳಿ ಭಾಗವತಿಕೆ ಅಭ್ಯಾಸ ಮಾಡಿದ ಬಳಿಕ ಸುಮಾರು 35 ವರ್ಷಕ್ಕೂ ಅಧಿಕ ಕಾಲ ವಿವಿಧ ಯಕ್ಷಗಾನ ಮೇಳಗಳಾದ ಸುರತ್ಕಲ್, ಕರ್ನಾಟಕ, ಮಂಗಳಾದೇವಿ, ಎಡನೀರು ಮೇಳಗಳಲ್ಲಿ  ವ್ಯವಸಾಯ ಮಾಡಿದರು ಸುರತ್ಕಲ್, ಮಂಗಳಾದೇವಿ, ಕರ್ನಾಟಕ, ಹೊಸನಗರ, ಹನುಮಗಿರಿ ಮೇಳಗಳಲ್ಲಿ ಪ್ರಧಾನ ಭಾಗವತರಾಗಿ ಬಹುಬೇಡಿಕೆಯ ಕಲಾವಿದರಾಗಿದ್ದರು.. ಸುರತ್ಕಲ್ ಮೇಳದಲ್ಲಿದ್ದಾಗ ನಾಟ್ಯರಾಣಿ ಶಾಂತಲೆ, ಪಾಪಣ್ಣ ವಿಜಯ, ಕಡುಗಲಿ ಕುಮಾರರಾಮ, ರಾಜಾ ಯಯಾತಿ ಮೊದಲಾದ ಪ್ರಸಂಗಗಳು ಜನಪ್ರಿಯವಾಗಿದ್ದವು. ಸುರತ್ಕಲ್ ಮೇಳವೊಂದರಲ್ಲೇ ಅವರು ಸುಮಾರು 25ಕ್ಕೂ ಅಧಿಕ ವರ್ಷಗಳ ಕಾಲ ತಿರುಗಾಟ ನಡೆಸಿದ್ದಾರೆ. . ದೇಶ ವಿದೇಶಗಳಲ್ಲಿ ಯಕ್ಷಗಾನದ ಕಂಪನ್ನು ಹರಡಿಸಿದ್ದ ಪದ್ಯಾಣ, ಈಟಿವಿಯ ಎದೆತುಂಬಿ ಹಾಡಿದೆನು ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭ ಅವರ ಹಾಡುಗಾರಿಕೆಯನ್ನು ಸ್ವತಃ ಎಸ್.ಪಿ.ಬಾಲಸುಬ್ರಹ್ಮಣ್ಯಂ ಪ್ರಶಂಸಿಸಿದ್ದರು. ಕನ್ನಡ, ತುಳು ಯಕ್ಷಗಾನದ ಧ್ವನಿಸುರುಳಿಗಳಲ್ಲಿ ಪದ್ಯಾಣ ಕಂಠ ಜನಪ್ರಿಯವಾಗಿದ್ದವು. ಅವರಿಗೆ ಹಲವು ಪ್ರಶಸ್ತಿ ಸನ್ಮಾನಗಳು ಸಂದಿವೆ. ಅವರ 60ನೇ ವಯಸ್ಸಿನಲ್ಲಿ ಮಂಗಳೂರಿನ ಪುರಭವನದಲ್ಲಿ ಅಭಿಮಾನಿಗಳು ಇಡೀ ದಿನ ಪದಯಾನ ಹೆಸರಿನಲ್ಲಿ ಕಾರ್ಯಕ್ರಮವನ್ನು ನಡೆಸಿದ್ದರು.

ಜಾಹೀರಾತು
ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಯಕ್ಷಗಾನದ ಹಿರಿಯ ಭಾಗವತ ಪದ್ಯಾಣ ಗಣಪತಿ ಭಟ್ ಇನ್ನಿಲ್ಲ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*