ಬಂಟ್ವಾಳ: ಧಾರಾಕಾರ ಮಳೆಗೆ ಗುಡ್ಡೆ ಜರಿತ, ತಾಲೂಕಿನ ಹಲವೆಡೆ ಹಾನಿ

EDITED AND OWNED BY – HARISH MAMBADY. For Advertisements, News Contact Watsapp No: 9448548127

ಬಂಟ್ವಾಳ: ಮಂಗಳವಾರದಿಂದೀಚೆಗೆ ಬಂಟ್ವಾಳ ತಾಲೂಕಿನಲ್ಲಿ ಸುರಿದ ಭಾರಿ ಮಳೆಗೆ ಬಂಟ್ವಾಳ ತಾಲೂಕಿನಲ್ಲಿ ಹಲವೆಡೆ ಗುಡ್ಡ ಜರಿತ, ತೋಟಗಳಿಗೆ ಹಾನಿಗಳಾಗಿವೆ.  ಕಂದಾಯ ಇಲಾಖೆ ನೀಡಿದ ಮಾಹಿತಿಯಂತೆ ಹಾನಿಗಳ ವಿವರ ಹೀಗಿದೆ.

ಅರಳ ಗ್ರಾಮದ ಗರುಡ ಮಹಾಂಕಾಳಿ ದೇವಸ್ಥಾನದ ಸಭಾಂಗಣದ ಹಿಂಭಾಗದ ಕಂಪೌಂಡ್ ಕುಸಿದಿದೆ. ಅಮ್ಟಾಡಿ ಗ್ರಾಮದ ಮಂಡೆಗುರಿ ಎಂಬಲ್ಲಿ ಜಾನಕಿ ಎಂಬವರ ಮನೆಯ ಮುಂಭಾಗ ಶೀಟ್ ಮೇಲೆ ಕಂಪೌಂಡ್ ಕುಸಿದಿದೆ. ಸಜಿಪಮೂಡ ಗುರುಮಂದಿರ ಬಳಿ ತಡೆಗೋಡೆ ಕುಸಿದು ರವಿ ಎಂಬವರ ಮನೆಗೆ ಬಿದ್ದಿದ್ದು ಹಾನಿಯಾಗಿದೆ. ಕರಿಯಂಗಳ ಗ್ರಾಮದ ರಂಜಿತ್ ಶೆಟ್ಟಿ ಅವರ ನಿರ್ಮಾಣ ಹಂತದ ಮನೆ ಕುಸಿದು ಸಂಪೂರ್ಣ ಹಾನಿಯಾಗಿರುತ್ತದೆ. ಸರಪಾಡಿ ಗ್ರಾಮದ ಉಜಿರಾಡಿ ಎಂಬಲ್ಲಿ ಐತಪ್ಪ ಪೂಜಾರಿ ಎಂಬುವವರ ವಾಸದ ಮನೆಯ ಬದಿಯಲ್ಲಿರುವ ತಡೆಗೋಡೆಯ ಮಳೆಗೆ ಜರಿದು ಬಿದ್ದಿದೆ. ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಮೇಲಿನ ಮನೆಯ ಕಾಂಪೌಂಡ್ ಕುಸಿದು ಚಿತ್ರಾವತಿ ಎಂಬುವವರ ವಾಸ್ತವ್ಯದ ಮನೆಗೆ ತೀವ್ರ ಹಾನಿಯಾಗಿರುತ್ತದೆ. ಅದೃಷ್ಟವಶಾತ್ ಮನೆಯ ಸದಸ್ಯರಿಗೆ ಯಾವುದೇ ಪ್ರಾಣ ಹಾನಿಯಾಗಿರುವುದಿಲ್ಲ. ಮನೆಯ ಸದಸ್ಯರನ್ನು ಸಂಬಂಧಿಕರ ಮನೆಗೆ ಸ್ಥಳಾಂತರಿಸಲಾಗಿರುತ್ತದೆ. ಬಂಟ್ವಾಳ ತಾಲೂಕು ಅನಂತಾಡಿ ಗ್ರಾಮದ ಬಾಕಿಲ ಎಂಬಲ್ಲಿ ವಾಣಿ ಎಂಬುವರ ಮನೆಯಂಗಳದ ಕಾಂಕ್ರೀಟಿನ ತಡೆಗೋಡೆಯು ಗಾಳಿ ಮಳೆಗೆ ಜರಿದು ಬಿದ್ದಿದ್ದು ಬಾಳೆ ಗಿಡಗಳು ಮುರಿದು ಬಿದ್ದಿರುತ್ತದೆ, ಮನೆಗೆ ಯಾವುದೇ ಹಾನಿಯಾಗಿರುವುದಿಲ್ಲ. ಅರಳ ಗ್ರಾಮದ ಆಲ್ಮುಡೆ ಎಂಬಲ್ಲಿ ಚಂದ್ರಾವತಿ ಎಂಬವರ ಮನೆ ಕಂಪೌಂಡ್ ಕುಸಿದಿದೆ. ಸಜೀಪನಡು ಗ್ರಾಮದ ದೇರಾಜೆ ಬರೆ ಮನೆ ಎಂಬಲ್ಲಿ ಲೀಲಾ ಕೋಂ ಸಂಜೀವ ಪೂಜಾರಿ ಅವರ ಮನೆಯ ಸಮೀಪ ಗುಡ್ಡೆಯ ಮಣ್ಣು ಜರಿದು ಬಿದ್ದಿದ್ದು ಮನೆಗೆ ಯಾವುದೇ  ಹಾನಿ ಆಗಿರುವುದಿಲ್ಲ ಬಾಳ್ತಿಲ ಗ್ರಾಮದ ಸುಧೆಕಾರು ಎಂಬಲ್ಲಿ ಸೇಸಪ್ಪ ನಾಯ್ಕ್ ರವರ ಮನೆಯ ಹಿಂಬದಿಯ ಗುಡ್ಡ ಜರಿದು ಬಿದ್ದಿರುತ್ತದೆ ಅರಳ ಗ್ರಾಮದ ಸುಂದರ ಎಂಬವರ ಮನೆ ಮೇಲೆ ಕಂಪೌಂಡ್ ಕುಸಿದಿದೆ. ಕೊಯಿಲ ಗ್ರಾಮದ ಮೋಹನ ಪೂಜಾರಿ ಇವರ ಮನೆಯ ಹಿಂಬದಿಗೆ ಹಾನಿಯಾಗಿರುತ್ತದೆ.

ಜಾಹೀರಾತು
ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ: ಧಾರಾಕಾರ ಮಳೆಗೆ ಗುಡ್ಡೆ ಜರಿತ, ತಾಲೂಕಿನ ಹಲವೆಡೆ ಹಾನಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*