ವಿಟ್ಲ

ಕಲ್ಲಡ್ಕ, ಪದ್ಯಾಣದಲ್ಲಿ ಉಚಿತ ಸಂಗೀತ ಪಾಠ: ಸಂಗೀತವಾಹಿನಿ ಮೂಲಕ ಜ್ಞಾನಪ್ರಸಾರ

EDITED AND OWNED BY – HARISH MAMBADY. For Advertisements, News Contact Watsapp No: 9448548127

ವಿಟ್ಲ: ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀ ಉಮಾಶಿವ ಕ್ಷೇತ್ರ ಮತ್ತು ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಗಳಲ್ಲಿ ಕಳೆದ ಒಂದು ವರ್ಷದಿಂದ ಡಾ.ಮಹೇಶ್ ಪದ್ಯಾಣ ಅವರು ಉಚಿತವಾಗಿ ಸಂಗೀತ ಪಾಠಗಳನ್ನು ಆಸಕ್ತರಿಗೆ ಹೇಳಿಕೊಡುವ ಮೂಲಕ ಜ್ಞಾನಪ್ರಸಾರ ಮಾಡುತ್ತಿದ್ದು, ಇದರ ಪ್ರಥಮ ವಾರ್ಷಿಕೋತ್ಸವವು ವಿಜಯದಶಮಿಯಂದು ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.

ಪದ್ಯಾಣ ಸಂಗೀತವಾಹಿನಿ ಮೂಲಕ ನಡೆದ ಈ ಕಾರ್ಯಕ್ರಮವನ್ನು ಪದ್ಯಾಣ ಗೋವಿಂದ ಭಟ್ ದೀಪ ಬೆಳಗಿಸಿ ಉದ್ಘಾಟಿಸಿದರು. ಡಾ. ಮಹೇಶ ಪದ್ಯಾಣ ಅವರು ಕಳೆದ ಒಂದು ವರ್ಷದಿಂದ 25 ಕ್ಕೂ ಹೆಚ್ಚು ಸಂಗೀತಾಸಕ್ತರಿಗೆ ಪದ್ಯಾಣದಲ್ಲಿ ಹಾಗೂ ಕಲ್ಲಡ್ಕದಲ್ಲಿ ಉಚಿತವಾಗಿ ಸಂಗೀತ ತರಗತಿಯನ್ನು ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ವಿಜಯದಶಮಿಯಂದು ಪದ್ಯಾಣದಲ್ಲಿ ಹೊಸದಾಗಿ ಸೇರ್ಪಡೆಗೊಂಡ ಸಂಗೀತ ವಿದ್ಯಾರ್ಥಿಗಳಿಗೆ ವಿದ್ಯಾರಂಭ ಹಾಗೂ ಗುರುವಂದನಾ ಕಾರ್ಯಕ್ರಮ ನಡೆಯಿತು. ಬಳಿಕ ಸಂಗೀತವಾಹಿನಿಯ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ನಡೆಯಿತು.  ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಸೇರಾಜೆ ಸತ್ಯನಾರಾಯಣ ಭಟ್  ಶುಭ ಹಾರೈಸಿ, ವಂದನಾರ್ಪಣೆ  ಮಾಡಿದರು. ಸಾವಿತ್ರಿ ಭಟ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.