ಕ್ಷೇತ್ರ ಪಾವಿತ್ರ್ಯತೆ ಉಳಿಸಲು ಆಗ್ರಹಿಸಿ ನರಹರಿ ಪರ್ವತ ಕಡೆಗೆ ಹಿಂಜಾವೇ ಪಾದಯಾತ್ರೆ

EDITED AND OWNED BY – HARISH MAMBADY. For Advertisements, News Contact Watsapp No: 9448548127

ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಆಶ್ರಯದಲ್ಲಿ ನಮ್ಮ ನಡಿಗೆ ನರಹರಿಯ ಕಡೆಗೆ ಪಾದಯಾತ್ರೆ ಮತ್ತು ಜನಜಾಗೃತಿ ಸಾರ್ವಜನಿಕ ಸಭೆ ಭಾನುವಾರ ಬೆಳಗ್ಗೆ ನಡೆಯಿತು.,

ಕಲ್ಲಡ್ಕ ಶ್ರೀರಾಮ ಮಂದಿರದ ಬಳಿಯಿಂದ ಮತ್ತು ಮೆಲ್ಕಾರ್ ಜಂಕ್ಷನ್ ನಿಂದ ಪಾದಯಾತ್ರೆ ನಡೆಯಿತು. ಬಳಿಕ ಸಭಾ ಕಾರ್ಯಕ್ರಮ ನಡೆದಿದ್ದು, ದಿಕ್ಸೂಚಿ ಭಾಷಣವನ್ನು ಬಾಲವಾಗ್ಮಿ ಹಾರಿಕಾ ಮಂಜುನಾಥ್ ಮಾಡಿದರು.ಪೂರ್ವಜರು ನಮಗೆ ಬಿಟ್ಟುಹೋದ ಆಸ್ತಿಯನ್ನು ರಕ್ಷಿಸುವ ಕೆಲಸವನ್ನು ನಾವು ಮಾಡಬೇಕು, ಈ ಕುರಿತು ನಾವು ಜಾಗೃತರಾಗಬೇಕು ಎಂದರು. ಅಪಘಾನಿಸ್ಥಾನದಲ್ಲಿ ಆದ ಘಟನೆಗಳು ಇಲ್ಲಿ ಆಗಬಾರದು ಎಂಬುದಾದರೆ, ನಾವು ಜಾಗೃತರಾಗಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಹಿಂದು ಜಾಗರಣಾ ವೇದಿಕೆ ಪ್ರಾಂತ ಕಾರ್ಯಕಾರಿಣಿ ಸದಸ್ಯ ರಾಧಾಕೃಷ್ಣ ಅಢ್ಯಂತಾಯ, ಕ್ಷೇತ್ರಗಳು ಒಳ್ಳೆಯದಾಗಬೇಕು, ಭಕ್ತರಿಗೆ ಉತ್ತಮ ವ್ಯವಸ್ಥೆಗಳು ಕಲ್ಪಿಸಬೇಕು ಆದರೆ ಪ್ರವಾಸೋದ್ಯಮ ಹೆಸರಲ್ಲಿ ಪಾವಿತ್ರ್ಯತೆ ಹಾಳಾಗುವುದನ್ನು ನಾವು ಸಹಿಸುವುದಿಲ್ಲ ಎಂದರು.

ಜಾಹೀರಾತು

ಪುತ್ತೂರು ಜಿಲ್ಲಾ ಸಂಪರ್ಕ ಪ್ರಮುಖ್ ನರಸಿಂಹ ಮಾಣಿ ಮಾತನಾಡಿ, ನರಹರಿ ಪರ್ವತ ನಮಗೆಲ್ಲರಿಗೂ ಶ್ರದ್ಧಾಕೇಂದ್ರ, ಇದರ ಪಾವಿತ್ರ್ಯ ಉಳಿಸಲು ಹಿಂದು ಜಾಗರಣಾ ವೇದಿಕೆ ವಿಟ್ಲ ತಾಲೂಕು ಕಟಿಬದ್ಧವಾಗಿದೆ ಎಂದರು.

ಸಭಾಧ್ಯಕ್ಷತೆಯನ್ನು ಹಿಂದು ಜಾಗರಣಾ ವೇದಿಕೆ ಪುತ್ತೂರು ಜಿಲ್ಲಾಧ್ಯಕ್ಷ ಜಗದೀಶ ನೆತ್ತರಕೆರೆ ವಹಿಸಿದ್ದರು. ವೇದಿಕೆಯಲ್ಲಿ ಪುತ್ತೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜಿತ್ ಹೊಸಮನೆ, ತಾಲೂಕು ಅಧ್ಯಕ್ಷ ಗಣೇಶ್ ಕುಲಾಲ್ ಕೆದಿಲ ಉಪಸ್ಥಿತರಿದ್ದರು. ತಾಲೂಕು ಪ್ರಧಾನ ಕಾರ್ಯದರ್ಶಿ ಅರುಣ್ ಸಜಿಪ ಸ್ವಾಗತಿಸಿದರು. ವೈಯಕ್ತಿಕ ಗೀತೆ, ವಂದೇ ಮಾತರಂ ಅನ್ನು ವಿದ್ಯಾಶ್ರೀ ಕಲ್ಲಡ್ಕ ಹಾಡಿದರು. ಕಲ್ಲಡ್ಕ ಮತ್ತು ಮೇಲ್ಕಾರ್ ನಿಂದ ನಡೆದ ಮೆರವಣಿಗೆಯಲ್ಲಿ ವಿಭಾಗ ಸಂಪರ್ಕ ಪ್ರಮುಖ್ ರತ್ನಾಕರ ಶೆಟ್ಟಿ ಕಲ್ಲಡ್ಕ, ಪ್ರಮುಖರಾದ ದಿನೇಶ್ ಅಮ್ಟೂರು, ಪುರುಷೋತ್ತಮ ಸಾಲಿಯಾನ್, ಪಿ.ಎಸ್.ಮೋಹನ್, ರವೀಶ್ ಶೆಟ್ಟಿ, ದಯಾನಂದ ಉಜಿರೆಮಾರು, ತಾಲೂಕು ಜಿಲ್ಲೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕ್ಷೇತ್ರ ಪಾವಿತ್ರ್ಯತೆ ಉಳಿಸಲು ಆಗ್ರಹಿಸಿ ನರಹರಿ ಪರ್ವತ ಕಡೆಗೆ ಹಿಂಜಾವೇ ಪಾದಯಾತ್ರೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*