ಮೂಲರಪಟ್ನ: ಸಿರಾಜುದ್ದೀನ್ ಖಾಸಿಮಿ ಅವರಿಂದ ಏಕದಿನ ಮತ ಪ್ರಭಾಷಣ

ಬಂಟ್ವಾಳ: ಮುಹಿಯುದ್ದೀನ್ ಜುಮಾ ಮಸೀದಿ ಮೂಲರಪಟ್ನ ಇದರ ನವೀಕರಣ ಹಾಗೂ ಮೀಲಾದುನ್ನಬಿ ಪ್ರಯುಕ್ತ ಶನಿವಾರ ರಾತ್ರಿ ಕೇರಳದ ಪ್ರಸಿದ್ಧ ವಾಗ್ಮಿ ಅಲ್ ಹಾಫಿಲ್ ಸಿರಾಜುದ್ದೀನ್ ಅಲ್ ಖಾಸಿಮಿ ಅವರ ಏಕ ದಿನ ಮತ ಪ್ರಭಾಷಣ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೂಲರಪಟ್ನ ಜುಮಾ ಮಸೀದಿ (ಎಂ.ಜೆ.ಎಂ.)ಯ ಖತೀಬ್ ಅಬ್ದುಸಲಾಂ ಯಮಾನಿ ತುಂಬೆ ಅವರು, ಇಲ್ಲಿನ ಮಸೀದಿಗೆ 800 ವರ್ಷಗಳ ಇತಿಹಾಸ ಇದ್ದು ನಾಡಿನ ಸೌಹಾರ್ದಗೆ ಅಪಾರ ಕೊಡುಗೆಯನ್ನು ನೀಡಿದೆ. ಅದೇ ಸೌಹಾರ್ದತೆ ಮುಂದೆಯೂ ಈ ಊರಿನ ಜನರಿಗೆ ಮಾದರಿಯಾಗಿ ಉಳಿಯಬೇಕು ಎಂದರು.

ಎಂ.ಜೆ.ಎಂ. ಮಾಜಿ ಖತೀಬ್ ಅಲ್ ಹಾಜ್ ಪಿ.ಅಬ್ದುಲ್ ಖಾದರ್ ಮದನಿ ದುಅ ನೆರವೇರಿಸಿದರು. ಎಂ.ಜೆ.ಎಂ. ಅಧ್ಯಕ್ಷ ಎಂ.ಬಿ.ಅಶ್ರಫ್ ಅಧ್ಯಕ್ಷತೆ ವಹಿಸಿದ್ದರು. ಎಸ್ಕೆಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅನೀಸ್ ಕೌಸರಿ ಪ್ರಸ್ತಾವಿಕ ಭಾಷಣ ಗೈದರು. ದ.ಕ. ಮುಸ್ಲಿಮ್ ಜಸ್ಟೀಸ್ ಫೋರಂ ಸದಸ್ಯ ಹನೀಫ್ ಖಾನ್ ಕೋಡಾಜೆ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಜಾಹೀರಾತು

ಇರ್ಷಾದ್ ದಾರಿಮಿ ಅಲ್ ಜಝರಿ ಮಿತ್ತಬೈಲ್, ಡಿ.ಯು.ಎಂ. ಸದರ್ ಮುಹಲ್ಲಿಂ ಪಿ.ಮುನೀರ್ ಅರ್ಷದಿ, ಫರಂಗಿಪೇಟೆ ಟಿಂಬರ್ ಮರ್ಚೆಂಟ್ ಮಾಲಕರಾದ ಹಾಸೀರ್ ಮೆಲ್ಮನೆ, ಮುಸ್ತಫಾ ಮೆಲ್ಮನೆ, ಮಂಗಳೂರು ಕಿಂಗ್ಸ್ ಮಾರ್ಬಲ್ಸ್ ಆ್ಯಂಡ್ ಗ್ರೈನೆಟ್ಸ್ ಕೋ. ಮಾಲಕ ಮುಹಮ್ಮದ್ ಮುಸ್ತಫಾ, ತೋಡರ್ ಆದರ್ಶ್ ವಿದ್ಯಾಸಂಸ್ಥೆಯ ಚೇರ್ ಮೆನ್ ಆಸೀಫ್, ಉದ್ಯಮಿ ನೌಷದ್ ಹಾಜಿ ಸೂರಲ್ಪಾಡಿ, ದೆಮ್ಮೆಲೆ ಜುಮಾ ಮಸೀದಿ ಅಧ್ಯಕ್ಷ ಮುಹಮ್ಮದ್ ಶರೀಫ್, ಪಿ.ಡಬ್ಲ್ಯೂಡಿ ಗುತ್ತಿಗೆದಾರ ಎಂ.ಎ.ಹಮ್ಮಬ್ಬ ಮೂಡಿಗೆರೆ, ಗಂಜಿಮಠ ಮಝ್ದಾ ಬೇಕರಿ ಮಾಲಕ ಯೂಸುಫ್ ಹಾಜಿ, ಮೂಲರಪಟ್ನ ಬಾವ ಹಾಜಿ ಹವ್ವಾ ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಅಬ್ದುಲ್ ಹಮೀದ್ ಹಾಜಿ, ಉದ್ಯಮಿ ಅಬ್ದುಲ್ಲಾ ಕೋಟೆಬಾಗಿಲು ಮೂಡಬಿದಿರೆ, ಬಿ.ಬಿ.ಎಸ್. ಗುರುವಾಯನಕೆರೆ ಉಸ್ಮಾನ್ ಶಾಫಿ, ಜಿ.ಎಚ್.ಎಂ.ಫೌಂಡೇಶನ್ ಅಧ್ಯಕ್ಷ ಮುಹಮ್ಮದ್ ಶಾಲಿ ಮೊದಲಾದವರು ಉಪಸ್ಥಿತರಿದ್ದರು.

ಮೌಲನಾ ಆಝಾದ್ ಆಂಗ್ಲ ಮಾದರಿ ಶಾಲೆಯ ಪ್ರಾಂಶುಪಾಲ ಹಾಜಿ ಮುಹಮ್ಮದ್ ಹನೀಫ್ ಮಾಸ್ಟರ್ ಮೂರಲಪಟ್ನ ಸ್ವಾಗತಿಸಿದರು. ನ್ಯಾಯವಾದಿ ಅನ್ಸಾರ್ ಧನ್ಯವಾದಗೈದರು. ಸಮಾಜ ಸೇವಕ ರಫೀಕ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮೂಲರಪಟ್ನ: ಸಿರಾಜುದ್ದೀನ್ ಖಾಸಿಮಿ ಅವರಿಂದ ಏಕದಿನ ಮತ ಪ್ರಭಾಷಣ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*