ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಶಾಸಕ ರಾಜೇಶ್ ನಾಯ್ಕ್ ಅಹವಾಲು ಸ್ವೀಕಾರ, 92 ಅರ್ಜಿ ಪರಿಶೀಲನೆ

*ವಿಳಂಬ ಮಾಡದೆ ಅರ್ಜಿ ವಿಲೇವಾರಿ – ಅಧಿಕಾರಿಗಳಿಗೆ ಸೂಚನೆ*

ಬಂಟ್ವಾಳ: ಒಟ್ಟು 92 ಮಂದಿ ಸೋಮವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ಕಂದಾಯ ಇಲಾಖೆ ಹಾಗೂ ಇತರ ಇಲಾಖೆಗಳ ಕುರಿತ ವಿಚಾರದ ಬಗ್ಗೆ ಅರ್ಜಿ ಸಲ್ಲಿಸಿದ್ದು, ಇವುಗಳನ್ನು ಪರಿಶೀಲಿಸಿದ ಶಾಸಕರು, ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ. ಇದೇ ವೇಳೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಅರ್ಜಿ ವಿಲೇವಾರಿ ಕುರಿತು ಯಾರೂ ವಿಳಂಬ ಧೋರಣೆ ಅನುಸರಿಸಬಾರದು ಎಂದರು.  ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಉಪಸ್ಥಿತಿಯಲ್ಲಿ ಶಾಸಕರು ವಿವಿಧ ಅಹವಾಲುಗಳನ್ನು ಆಲಿಸಿದರು.

ಜಿಪಂ ಮಾಜಿ ಸದಸ್ಯ ತುಂಗಪ್ಪ ಬಂಗೇರ, ಪುರಸಭಾ ಸದಸ್ಯ ಎ.ಗೋವಿಂದ ಪ್ರಭು ಮತ್ತು ಹರಿಪ್ರಸಾದ್ ವಿವಿಧ ಸಮಸ್ಯೆಗಳ ಕುರಿತು ಗಮನಕ್ಕೆ ತಂದರು. ನರಿಕೊಂಬು ಗ್ರಾಮದ ವ್ಯಕ್ತಿಯೊಬ್ಬರ ಮನೆಗೆ ಹಾನಿಯಾಗಿರುವ ಕುರಿತು ೪೫ ಸಾವಿರ ರೂ. ಮಂಜೂರಾಗಿದ್ದು, ಆದರೆ ಹೆಚ್ಚಿನ ಹಾನಿ ಸಂಭವಿಸಿರುವ ಕುರಿತು ಶಾಸಕರ ಗಮನಕ್ಕೆ ಬಂದಾಗ ಅದನ್ನು ತಹಶೀಲ್ದಾರ್ ಅವರಿಗೆ ತಿಳಿಸಿ, ಹಾನಿಗೊಳಗಾದ ಮನೆಯವರಿಗೆ ಸ್ಥಳದಲ್ಲೇ ೯೫ ಸಾವಿರ ರೂ.ಗಳ ಚೆಕ್ ವಿತರಿಸಲಾಯಿತು. ಜತೆಗೆ ತಿರಸ್ಕೃತಗೊಂಡಿದ್ದ ೯೫ಸಿ ಅರ್ಜಿಯನ್ನು ಮರುಪರಿಶೀಲನೆ ನಡೆಸಿ ಕಾಮಾಜೆಯ ಸುಧಾ ಅವರಿಗೆ ಹಕ್ಕುಪತ್ರ ವಿತರಿಸಲಾಯಿತು.

ಜಾಹೀರಾತು

ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಜಿಪಂ ಮಾಜಿ ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್ ಶೆಟ್ಟಿ ಕರ್ಕಳ, ಅಕ್ರಮ ಸಕ್ರಮ ಸಮಿತಿ ಸದಸ್ಯ ರಮನಾಥ ರಾಯಿ, ಹಿಂದುಳಿದ ವರ್ಗ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಸಾಲಿಯಾನ್ ನರಿಕೊಂಬು, ಪ್ರಮುಖರಾದ ಪವನ್ ಕುಮಾರ್ ಶೆಟ್ಟಿ, ರಂಜಿತ್ ಮೈರ, ವಿಶ್ವನಾಥ್ ಚಂಡ್ತಿಮಾರ್, ಪ್ರಣಾಮ್ ಅಜ್ಜಿಬೆಟ್ಟು, ಮನೋಜ್ ಮತ್ತಿತರರು ಉಪಸ್ಥಿತರಿದ್ದರು.

ತಾಲೂಕು ಕಚೇರಿಯ ಗ್ರೇಡ್ 2 ತಹಶೀಲ್ದಾರ್ ಕವಿತಾ, ಉಪತಹಶೀಲ್ದಾರ್‌ಗಳಾದ ನರೇಂದ್ರನಾಥ್ ಭಟ್,  ದಿವಾಕರ ಮುಗುಳಿಯ, ನವೀನ್ ಬೆಂಜನಪದವು, ವಿಜಯವಿಕ್ರಮ, ರಾಜೇಶ್, ಕಂದಾಯ ನಿರೀಕ್ಷಕರಾದ ಧರ್ಮಸಾಮ್ರಾಜ್ಯ, ಕುಮಾರ್, ಮಂಜುನಾಥ್, ಪ್ರಥಮ ದರ್ಜೆ ಸಹಾಯಕ ಸೀತಾರಾಮ್ ಅವರು ಅರ್ಜಿಗಳ ಕುರಿತು ಶಾಸಕರ ಸಮ್ಮುಖದಲ್ಲಿ ಸಾರ್ವಜನಿಕರಿಗೆ ಉತ್ತರ ನೀಡಿದರು. 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಶಾಸಕ ರಾಜೇಶ್ ನಾಯ್ಕ್ ಅಹವಾಲು ಸ್ವೀಕಾರ, 92 ಅರ್ಜಿ ಪರಿಶೀಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*