ಜಿಲ್ಲಾ ಸುದ್ದಿ

ಬಂಟವಾಳ ಬಂಟರ ಭವನದಲ್ಲಿ 30ರಂದು ಜಿಲ್ಲಾ ಮಟ್ಟದ ಸಾಲ ಸಂಪರ್ಕ ಕಾರ್ಯಕ್ರಮ, ಮಾಹಿತಿ ಕಾರ್ಯಕ್ರಮ

ಮುದ್ರಾ ಸಾಲ ಯೋಜನೆಯಲ್ಲಿ ದ.ಕ.ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಬಂಟ್ವಾಳದಲ್ಲಿ ನಳಿನ್ ಕುಮಾರ್ ಕಟೀಲ್

ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿಯವರ ಮುದ್ರಾ ಸಾಲ ಯೋಜನೆಯಲ್ಲಿ ದ.ಕ.ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನ ಪಡೆದಿದ್ದು, ಜನಧನ್ ಖಾತೆಯಲ್ಲಿ 100 ಶೇ. ಪ್ರಗತಿ ಸಾಧಿಸಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ದ.ಕ.ಜಿಲ್ಲೆಯ ರಾಷ್ಟ್ರೀಕೃತ, ಖಾಸಗಿ, ಸ್ಥಳೀಯ ಬ್ಯಾಂಕ್‌ಗಳು, ನಬಾರ್ಡ್ ಮತ್ತು ಇತರೆ ಸರಕಾರಿ ಇಲಾಖೆ ಸಹಯೋಗದೊಂದಿಗೆ ಅ. 30ರಂದು ಬೆಳಗ್ಗೆ 10ಕ್ಕೆ ಬಿ.ಸಿ.ರೋಡಿನ ಬಂಟರ ಭವನದಲ್ಲಿ ಜಿಲ್ಲಾ ಮಟ್ಟದ ಸಾಲ ಸಂಪರ್ಕ ಕಾರ್ಯಕ್ರಮ ಹಾಗೂ ಮಾಹಿತಿ ಕಾರ್ಯಾಗಾರ ನಡೆಯುವ ಕುರಿತು ಬಂಟ್ವಾಳದ ಬಂಟರ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಬ್ಯಾಂಕ್‌ಗಳಲ್ಲಿ ಲಭ್ಯವಿರುವ ಸಾಲ ಸೌಲಭ್ಯಗಳ ಅರಿವು ಮೂಡಿಸಲು ಹಾಗೂ ಕೇಂದ್ರ-ರಾಜ್ಯ ಸರಕಾರಗಳ ವಿವಿಧ ಯೋಜನೆಗಳ ಮಾಹಿತಿ ನೀಡಲು ಈ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ವಿವಿಧ ಬ್ಯಾಂಕ್‌ಗಳ ಸ್ಟಾಲ್‌ಗಳ ಮೂಲಕ ಸಾಲ ಅರ್ಜಿ ಸ್ವೀಕಾರ, ಮಂಜೂರಾತಿ, ತಾತ್ವಿಕ ಮಂಜೂರಾತಿ ಪತ್ರ ವಿತರಣಾ ಕಾರ್ಯವೂ ನಡೆಯಲಿದೆ. ಗ್ರಾಮೀಣ ಭಾಗದಲ್ಲಿ ಬ್ಯಾಂಕ್‌ಗಳಲ್ಲಿ ಭಾಷಾ ಸಮಸ್ಯೆಯ ಕುರಿತು ಹಲವು ದೂರುಗಳಿದ್ದು, ಅದರ ನಿವಾರಣೆಯ ದೃಷ್ಟಿಯಿಂದ ಸ್ಥಳೀಯ ಭಾಷೆಯ ಕನಿಷ್ಠ ಓರ್ವ ಸಿಬಂದಿಯನ್ನು ನಿಯೋಜಿಸುವಂತೆ ಬ್ಯಾಂಕ್‌ಗಳಿಗೆ ಸೂಚಿಸಲಾಗಿದೆ ಎಂದರು.  

ಜಾಹೀರಾತು

ಕಾರ್ಯಕ್ರಮವನ್ನು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ್ ಖೂಬ ಉದ್ಘಾಟಿಸಲಿದ್ದು, ಮೀನುಗಾರಿಕೆ-ಬಂದರು ಇಲಾಖೆ ಸಚಿವ ಎಸ್.ಅಂಗಾರ, ಸಾಮಾಜ ಕಲ್ಯಾಣ-ಹಿಂಉಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ದ.ಕ.ಸಂಸದ ನಳಿನ್‌ಕುಮಾರ್ ಕಟೀಲು ಭಾಗವಹಿಸಲಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ, ಜಿ.ಪಂ.ಸಿಇಒ ಡಾ| ಕುಮಾರ್, ಕೆನರಾ ಬ್ಯಾಂಕ್ ಮಹಾಪ್ರಬಂಧಕ ಯೋಗೀಶ್ ಆಚಾರ್ಯ, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರವೀಣ್ ಎಂ.ಪಿ, ಎಂಇಐ ಲಿಮಿಟೆಡ್ ಅಧ್ಯಕ್ಷ ಸಂತೋಷ್‌ಕುಮಾರ್ ರೈ, ಬೂಡ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ ಉಪಸ್ಥಿತರಿದ್ದರು. 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.