Uncategorized

ಕಲ್ಲಡ್ಕದಲ್ಲಿ ಒಡಿಯೂರು ಶ್ರೀಗಳ ಷಷ್ಟ್ಯಬ್ಧಿ ಸರಣಿ ಕಾರ್ಯಕ್ರಮಗಳ ಸಮಾರೋಪ

ಬಂಟ್ವಾಳ: ಒಡಿಯೂರು ಶ್ರೀಗಳ ಷಷ್ಟ್ಯಬ್ದ ಸಮಿತಿ, ಮತ್ತು ಒಡಿಯೂರು ಶ್ರೀಗಳ ಗ್ರಾಮ ವಿಕಾಸ ಯೋಜನೆ ಕಲ್ಲಡ್ಕ ವಲಯ ಆಶ್ರಯದಲ್ಲಿ ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕಲ್ಲಡ್ಕ ಸಹಭಾಗಿತ್ವದಲ್ಲಿ ಸ್ವಾಮೀಜಿಯವರ ಷಷ್ಟ್ಯಬ್ದ ಅಂಗವಾಗಿ ನಡೆದ ಸರಣಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭ ಕಲ್ಲಡ್ಕ ಶ್ರೀರಾಮ ಮಂದಿರದ ಮಾಧವ ಸಭಾಭವನದಲ್ಲಿ ಭಾನುವಾರ ನಡೆಯಿತು.

ಈ ಸಂದರ್ಭ ಆಶೀರ್ವಚನ ನೀಡಿದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಸಮಾಜಕ್ಕೆ ಅಗತ್ಯವಾದ ಕೆಲಸ ಆಗಬೇಕು. ಮಾನವೀಯತೆಯನ್ನು ಮರೆಯುತ್ತಿದ್ದೇವೆ. ಅದು ಆಗದಂತೆ ನೋಡಿಕೊಳ್ಳಬೇಕು ಎಂದರು.ಅಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ವಹಿಸಿದ್ದರು.ಅತಿಥಿಗಳಾಗಿ ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ಒಡಿಯೂರು ಶ್ರೀ ಸೌಹಾರ್ದ ವಿವಿಧೋದ್ದೇಶ ಸಹಕಾರಿ ನಿಯಮಿತ ಅಧ್ಯಕ್ಷ ಸುರೇಶ್ ರೈ, ಷಷ್ಟ್ಯಬ್ದ ಸಂಭ್ರಮ ಕೇಂದ್ರ ಸಮಿತಿ ಕಾರ್ಯಾಧ್ಯಕ್ಷ ಕೆ.ಪದ್ಮನಾಭ ಕೊಟ್ಟಾರಿ ಉಪಸ್ಥಿತರಿದ್ದರು. ಉದ್ಯೋಗ ತರಬೇತಿಯ ಕೈಪಿಡಿ ಬಿಡುಗಡೆಗೊಳಿಸಲಾಯಿತು. ಕೃಷಿ ಮಾಹಿತಿಯನ್ನು  ತಜ್ಞ ಬಾಲಸುಬ್ರಹ್ಮಣ್ಯ ಎಚ್.ಎಂ. ನೀಡಿದರು. ಸಮಿತಿ ಅಧ್ಯಕ್ಷ ರಾಧಾಕೃಷ್ಣ ಅಡ್ಯಂತಾಯ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ನಾಗೇಶ್ ಶೆಟ್ಟಿ ಬೊಂಡಾಲ, ಪ್ರಮುಖರಾದ ಷಷ್ಟ್ಯಬ್ದಿ ಸಮಿತಿ ತಾಲೂಕು ಕಾರ್ಯದರ್ಶಿ ದಿನೇಶ್ ಅಮ್ಟೂರು ಇದ್ದರು. ರಾಜೇಶ್ ಕೊಟ್ಟಾರಿ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts