ವಿಟ್ಲ ಸಮೀಪ ಮಂಗಳ ಮಂಟಪದಲ್ಲಿ ಆರೋಗ್ಯ ತಪಾಸಣಾ ಶಿಬಿರ

ವಿಟ್ಲ ಸಮೀಪ ಮಂಗಳ ಮಂಟಪದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತೆಂಗು ರೈತ ಕಂಪನಿ ನಿಯಮಿತ, ಬಂಟ್ವಾಳ ಕಾರ್ಯ ನಿರತ ಪತ್ರಕರ್ತರ ಸಂಘ, ಲಯನ್ಸ್ ಕ್ಲಬ್ ವಿಟ್ಲ, ಕಾರ್ತಿಕ್ ಫ್ರೆಂಡ್ಸ್ ಚಂದಳಿಕೆ, ಎಲ್. ಎನ್. ಎಸ್. ಎಂ. ಚಾರಿಟೇಬಲ್ ಟ್ರಸ್ಟ್, ಕೆ. ಎಂ. ಸಿ. ಹಾಸ್ಪಿಟಲ್ ಅತ್ತಾವರ ಮಂಗಳೂರು ಆಶ್ರಯದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಸಂಸ್ಥೆಯ ಬೆಳವಣಿಗೆಗೆ ರೈತರ ಸಹಕಾರ ಅವಶ್ಯಕವಾಗಿದೆ. ತೆಂಗು ಕಂಪನಿಯಿಂದ ಅಡಿಕೆ ಹಳದಿ ರೋಗ ನಿವಾರಣೆಗೆ ಔಷಧಿ ಸಂಶೋಧನೆಯಾಗಿರುವುದು ಮಹತ್ವದ ವಿಚಾರವಾಗಿದೆ. ರೈತರಿಂದ ರೈತರಿಗಾಗಿರುವ ಕಂಪನಿ ರೈತರ ಆರೋಗ್ಯದ ಬಗ್ಗೆ ಕಾಳಜಿ ವಹಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿದ ತೆಂಗು ರೈತ ಉತ್ಪಾದಕರ ಕಂಪನಿ ವಿಜ್ಞಾನಿ ಡಾ. ಬಿ. ಕೆ. ವಿಶು ಕುಮಾರ್ ಹೇಳಿದರು.ಲಯನ್ಸ್ ಅಧ್ಯಕ್ಷ ಮೋನಪ್ಪ ಗೌಡ ಶುಭ ಹಾರೈಸಿದರು. ಸುಮಾರು 211 ಮಂದಿ ಶಿಬಿರದಲ್ಲಿ ಭಾಗವಹಿಸಿ ದಂತ ಚಿಕಿತ್ಸೆ, ಎಲುಬು, ಕೀಲು, ಕಣ್ಣು, ಕಿವಿ, ಜನರಲ್ ಮೆಡಿಸಿನ್, ಮಕ್ಕಳ, ಹೆಂಗಸರ ಹಾಗೂ ಚರ್ಮ ರೋಗಗಳ ತಪಾಸಣೆ ನಡೆಸಿದರು. ಅಧ್ಯಕ್ಷತೆಯನ್ನು ಎಲ್.ಎನ್.ಎಸ್.ಎಂ. ಚಾರಿಟೇಬಲ್ ಟ್ರಸ್ಟ್ ನ ಸಂತೋಷ್ ಶೆಟ್ಟಿ ವಹಿಸಿದ್ದರು. ಬಂಟ್ವಾಳ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಚಂದಳಿಕೆ ಕಾರ್ತಿಕ್ ಪ್ರೆಂಡ್ಸ್‌ನ ಕೃಷ್ಣ ಮುದೂರು, ಕೆ.ಎಂ.ಸಿ. ವೈದ್ಯಾಧಿಕಾರಿ ಡಾ. ಕನಿಷ್ಕ್, ದಂತ ವೈದ್ಯ ಡಾ. ಅವಿನಾಶ್, ದಕ್ಷಿಣ ಕನ್ನಡ ಜಿಲ್ಲಾ ತೆಂಗು ರೈತ ಕಂಪನಿ ನಿಯಮಿತ ಅಧ್ಯಕ್ಷ ಎಂ. ಪ್ರಸಾದ್ ಶೆಟ್ಟಿ, ಉಪಾಧ್ಯಕ್ಷ ಕುಸುಮ್ ರಾಜ್, ನಿರ್ದೇಶಕ ವರ್ಧಮಾನ್ ಜೈನ್, ಕಾರ್ಯ ನಿರ್ವಹಣಾಧಿಕಾರಿ ಜ್ಞಾನ ಮತ್ತಿತರರು ಉಪಸ್ಥಿತರಿದ್ದರು. ನೋಡಲ್ ಅಧಿಕಾರಿ ಸುಬ್ಬು ಸಂಟ್ಯಾರ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವಿಟ್ಲ ಸಮೀಪ ಮಂಗಳ ಮಂಟಪದಲ್ಲಿ ಆರೋಗ್ಯ ತಪಾಸಣಾ ಶಿಬಿರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*