ಜಿಲ್ಲಾ ಸುದ್ದಿ

ಇಂದಬೆಟ್ಟುವಿನಲ್ಲಿ ನಡೆದ ಕಳವು ಪ್ರಕರಣ ಮೂವರು ಆರೋಪಿಗಳ ಬಂಧನ, ಸೊತ್ತು ವಶಕ್ಕೆ

ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

ಬೆಳ್ತಂಗಡಿ: ಇಂದಬೆಟ್ಟು ದೇರಾಜೆ ಮನೆಯ ಮಹಮ್ಮದ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಲಕ್ಷಾಂತರ ರೂ ಮೌಲ್ಯದ ಆಭರಣ ಸಹಿತ ಸೊತ್ತುಗಳನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ 1 ) ಮಹಮ್ಮದ್ ಸ್ವಾಲಿ (26) ನಾವೂರು ಗ್ರಾಮ , ಬೆಳ್ತಂಗಡಿ ತಾಲೂಕು , 2 ) ಯಾಹ್ಯಾ (32) ಲಾಯಿಲಾ ಗ್ರಾಮ , ಬೆಳ್ತಂಗಡಿ ತಾಲೂಕು 3 ) ಬಿ.ಎಚ್ ನೌಫಲ್ (27) ನಾವೂರು ಗ್ರಾಮ ಅವರನ್ನು ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಕಾರು , ಪಲ್ಸರ್ ಎನ್ ಎಸ್ ಮೋಟಾರು ಸೈಕಲ್ , ನಾಲ್ಕು ಮೊಬೈಲ್ ಹ್ಯಾಂಡ್ ಸೆಟ್ (ಇವುಗಳ ಒಟ್ಟು ಮೌಲ್ಯ 1,69,500 ರೂಗಳು) , , ಹಾಗೂ ಕಳವಾದ 12,05,200 ರೂಪಾಯಿ ಮೌಲ್ಯದ 320 ಗ್ರಾಂ ಚಿನ್ನಾಭರಣಗಳು, ನಗದು 1230 ರೂ ಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸೋನಾವಣೆ ಋಷಿಕೇಶ್ ಭಗವಾನ್, ಹೆಚ್ಚುವರಿ ಅಧೀಕ್ಷಕ ಶಿವಕುಮಾರ್ ಗುಣಾರೆ, ನಿರ್ದೇಶನದಂತೆ ಎಎಸ್ಪಿ ಶಿವಾಂಶು ರಜಪೂತ್ ಸೂಚನೆಯಂತೆ ಈ ಪ್ರಕರಣದ ತನಿಖಾಧಿಕಾರಿಯಾದ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಶಿವಕುಮಾರ ಬಿ, ಬೆಳ್ತಂಗಡಿ ಪೊಲೀಸ್ ಠಾಣಾ ಪಿ.ಎಸ್.ಐ ನಂದಕುಮಾರ್, ಪ್ರೊಬೆಷನರಿ.ಪಿಎಸ್‌ಐ ಮೂರ್ತಿ, ಎಎಸೈ ದೇವಪ್ಪ, ಸಿಬ್ಬಂದಿಗಳಾದ ಲಾರೆನ್ಸ್ ರಾಜೇಶ್ ಎನ್ , ವೃಷಭ , ಪ್ರಮೋದ್ ನಾಯ್ಕ , ಇಬ್ರಾಹಿಂ ಗರ್ಡಾಡಿ , ಲತೀಫ್ , ವಿಜಯ ಕುಮಾರ್ ರೈ , ವೆಂಕಟೇಶ್ , ಬಸವರಾಜ್ , ಚರಣ್ , ಅವಿನಾಶ್, ವಾಹನ ಚಾಲಕರಾದ ಮಹಮ್ಮದ್ ಆಸೀಫ್ , ಸತೀಶ್, ತಾಂತ್ರಿಕ ಸಿಬ್ಬಂದಿಗಳಾದ ದಿವಾಕರ, ಸಂಪತ್ ಕುಮಾರ್ ಸಹಾಯದಿಂದ ಆರೋಪಿಗಳನ್ನು ಪತ್ತೆ ಮಾಡಲಾಯಿತು.

ಜಾಹೀರಾತು

ಸ್ವಾಧೀನ ಪಡಿಸಿಕೊಂಡ ಸ್ವತ್ತುಗಳ ಒಟ್ಟು ಮೌಲ್ಯ 13,75,930 ರೂಪಾಯಿ ಆಗಿದ್ದು , ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.ಅಕ್ಟೋಬರ್ 31ರಂದು ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯ ಯಾರೋ ಕಳ್ಳರು ಮನೆಗೆ ನುಗ್ಗಿ ಮನೆಯ ಗೋದ್ರೇಜ್ ನಲ್ಲಿಟ್ಟಿದ್ದ 13 ಪವನಿನ ಚಿನ್ನದ ನೆಕ್ಲೀಸ್ 01 , ಒಂದು ಪವನಿನ ಚಿನ್ನದ ಚೈನ್ – 01 , ಒಂದು ಪವನಿನ ಚಿನ್ನದ ಸಣ್ಣ ಚೈನ್ – 01 , ಒಂದೂವರೆ ವವನಿನ ಚಿನ್ನದ ಮಕ್ಕಳ ಚೈನ್ – 02 , ತಲಾ ಒಂದು ಒಂದು ಪವನಿನ ಚಿನ್ನದ ಕಾಯಿನ್ಸ್ – 04 , ತಲಾ ನಾಲ್ಕು ಪವನಿನ ಚಿನ್ನದ ಬಿಸ್ಕೆಟ್ – 04 – ಎರಡು ಪವನಿನ ಚಿನ್ನದ ಗಟ್ಟಿ – 01 ಅರ್ಧ ಪವನಿನ ಚಿನ್ನದ ಬ್ರಾಸ್ ಲೈಟ್ – 01 : ಅರ್ಧ ಪವನಿನ ಚಿನ್ನದ ತುಂಡಾದ ಬಳೆ ಹಾಗೂ ಪೆಂಡೆಂಟ್ – 01 , ಅರ್ಧ ಪವನಿನ ಚಿನ್ನದ ಮಗುವಿನ ಕಿವಿ ಓಲೆ -01 ಜೊತೆ , ಮುಂತಾದ ಸುಮಾರು 12,05,200 ರೂಪಾಯಿ ಮೌಲ್ಯದ ವಿವಿಧ ರೀತಿಯ 40 ಪವನ್ ಚಿನ್ನಾಭರಣಗಳು ಮತ್ತು ನಗದು ಹಣ 5200 ರೂಪಾಯಿ ಕಳವಾಗಿದ್ದ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

2 hours ago