ಕಲ್ಲಡ್ಕ

ನೆಟ್ಲ: ಶ್ರೀ ನಿಟಿಲಾಕ್ಷನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವ

ಬಂಟ್ವಾಳ: ನೆಟ್ಲ ನಿಟಿಲಾಪುರದಲ್ಲಿರುವ ಮೊಗರನಾಡು ಸಾವಿರ ಸೀಮೆಯ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ವರ್ಷಾವಧಿ ಜರಗುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನಡೆದವು. ಶನಿವಾರ ಲಕ್ಷದೀಪೋತ್ಸವ ಹಿನ್ನೆಲೆಯಲ್ಲಿ ಶ್ರೀದೇವರ ಲಕ್ಷದೀಪೋತ್ಸವ ಸವಾರಿ ಹೊರಟು ರಾತ್ರಿ ಕ್ಷೇತ್ರದಲ್ಲಿ ಬಲಿ ಉತ್ಸವ ನೆರವೇರಿತು.  ಸೋಮವಾರ ಶತರುದ್ರಾಭಿಷೇಕ ಹಾಗೂ ಸೂರ್ಯೋದಯದಿಂದ ಮಂಗಳವಾರ ಸೂರ್ಯೋದಯದವರೆಗೆ ಕಾರ್ತಿಕ ಅಖಂಡ ಭಜನೋತ್ಸವ ನಡೆಯಲಿದ್ದು, ಸುಮಾರು 22ರಷ್ಟು ಭಜನಾ ಮಂಡಳಿಗಳು ಪಾಲ್ಗೊಳ್ಳಲಿವೆ. ಕಾರ್ಯಕ್ರಮದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಸುಬ್ರಹ್ಮಣ್ಯ ಭಟ್, ಸದಸ್ಯರಾದ ಪ್ರಧಾನ ಅರ್ಚಕ ಸಂಪ್ರೀತ್ ಭಟ್, ಪಿ.ಕುಮಾರಸ್ವಾಮಿ ನೆಟ್ಲ, ನವೀನ್ ಕುಮಾರ್ ಶೆಟ್ಟಿ ಚನಿಲ, ಸುಜಿತ್ ಕುಮಾರ್ ಕಲ್ಲಡ್ಕ, ಅನಿಲ್ ಕುಮಾರ್ ನೆಟ್ಲ, ದಿವ್ಯಾ ರಮೇಶ್ ಪೂಜಾರಿ ಹೊಸಕಟ್ಟ, ಸುಚಿತ್ರ ಅನಂತ ಭಟ್ ಪಳನೀರು, ಭವ್ಯ ಐತಪ್ಪ ನಾಯ್ಕ ನೆಟ್ಲ ಸಹಿತ ವಿವಿಧ ಸಮಿತಿಗಳ ಸದಸ್ಯರು, ಭಕ್ತರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ