ಜನಪರ ಸಾಹಿತ್ಯ ಪರಿಷತ್: ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಡಾ. ಎಂ.ಪಿ.ಶ್ರೀನಾಥ್ ಭರವಸೆ

ಬಂಟ್ವಾಳ: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ್ನು ಕ್ರಿಯಾಶೀಲವಾಗಿ ಪುನರ್ ರೂಪಿಸಿ, ಚಟುವಟಿಕೆಯನ್ನು ಗುಣಾತ್ಮಕವಾಗಿ ವಿಸ್ತರಿಸಲು ಪ್ರಯತ್ನಿಸಲಾಗುವುದು, ಜನಪರ ಸಾಹಿತ್ಯ ಪರಿಷತ್ ನಮ್ಮ ಧ್ಯೇಯ ಎಂದು ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಡಾ.ಎಂ.ಪಿ.ಶ್ರೀನಾಥ್ ಉಜಿರೆ ಭರವಸೆ ನೀಡಿದ್ದಾರೆ.

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ತಮ್ಮು ಮುಂದಿನ ಯೋಚನೆ, ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಜಿಲ್ಲೆ ಸೇರಿದಂತೆ ತಾಲೂಕು ಮಟ್ಟದಲ್ಲಿ ಸುಸಜ್ಜಿತ ಕನ್ನಡ ಭವನದ ನಿರ್ಮಾಣ,ಶಾಲಾ- ಕಾಲೇಜುಗಳಲ್ಲಿ ಸಾಹಿತ್ಯ ಚಟುವಟಿಕೆಯನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿ ಪ್ರತಿಭೆಗಳಿಗೆ ಸೂಕ್ತವಾದ ವೇದಿಕೆ ನಿರ್ಮಿಸಿಕೊಡುವುದು,ಜಿಲ್ಲೆಯಲ್ಲಿರುವ ಪ್ರತಿಭಾವಂತ ಸಾಹಿತಿಗಳನ್ನು ಗುರುತಿಸಿ ಅವರ ಸಾಹಿತ್ಯಕ್ಕೆ ವೇದಿಕೆ ಕಲ್ಪಿಸಿಕೊಡುವುದು,ಸೃಜನಶೀಲ ಕಾರ್ಯಕ್ರಮಗಳಿಗೆ ಆದ್ಯತೆ,ಹಿರಿಯ ಸಾಹಿತಿಗಳ ಮಾರ್ಗದರ್ಶನದಿಂದ ಯುವ ಸಾಹಿತಿ,ಕವಿಗಳಿಗೆ ಅವಕಾಶ ಕಲ್ಪಿಸಿ ಪ್ರೇರಣೆ ನೀಡಲು ಉದ್ಧೇಶಿಸಿರುವುದಾಗಿ ತಿಳಿಸಿದರು.

ತಂತ್ರಜ್ಞಾನವನ್ನು ಬಳಸಿಕೊಂಡುಜಿಲ್ಲೆಯ ಸಾಹಿತಿಗಳ ಮತ್ತು ಸಾಹಿತ್ಯ ಕೃತಿಗಳ ದಾಖಲೀಕರಣಗೊಳಿಸುವುದು,ಕನ್ನಡದ ಉತ್ತಮ ಕೃತಿಗಳನ್ನು ಬೇರೆ ಭಾಷೆಗಳಿಗೆ ಅನುವಾದ ಮಾಡಲು ಪ್ರೋತ್ಸಾಹಿಸುವುದು,ತಂತ್ರಜ್ಞಾನದ ಮೂಲಕ ಓದುಗರಿಗೆ ಕನ್ನಡ ಪುಸ್ತಕಗಳು ಸಿಗುವ ನಿಟ್ಟಿನಲ್ಲಿ‌ ಪ್ರಯತ್ನಿಸಲಾಗುವುದು ಎಂದು ಅವರು ನ.21 ರಂದು ಸಾಹಿತ್ಯ ಪರಿಷತ್ತಿನ ಚುನಾವಣೆಯು ಆಯಾಯ ತಾಲೂಕು ಕೇಂದ್ರದಲ್ಲಿ ಬೆ.8 ರಿಂದ ಸಂಜೆ 4 ರವರೆಗೆ ನಡೆಯಲಿದ್ದು ,ತನ್ನನ್ನು‌ ಬಹುಮತದಿಂದ ಗೆಲ್ಲಿಸುವಂತೆ ಮನವಿ ಮಾಡಿದರು.ಸುದ್ದಿಗೋಷ್ಠಿಯಲ್ಲಿ ಹಿರಿಯ ಕಲಾವಿದರಾದ ಸರಪಾಡಿ ಅಶೋಕ್ ಶೆಟ್ಟಿ, ಮಂಜು ವಿಟ್ಲ, ಸುಭಾಶ್ಚಂದ್ರ ಜೈನ್, ಕಸಾಪ ತಾಲೂಕು ಘಟಕದ ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ ಇದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಜನಪರ ಸಾಹಿತ್ಯ ಪರಿಷತ್: ದ.ಕ.ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಡಾ. ಎಂ.ಪಿ.ಶ್ರೀನಾಥ್ ಭರವಸೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*