ಔಷಧೀವನ, ಅಡಕೆ ತೋಟ – ಪೆರ್ಲಾಪುವಿನಲ್ಲಿರುವ ಕಡೇಶಿವಾಲಯದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕೃಷಿ ಪಾಠ

ಹರೀಶ ಮಾಂಬಾಡಿ

ಬಂಟ್ವಾಳ ತಾಲೂಕಿನ ಪೆರ್ಲಾಪು ಎಂಬಲ್ಲಿ ಕಡೇಶಿವಾಲಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಳೆದ ಕೆಲ ವರ್ಷಗಳಿಂದ ತನ್ನ ಕೃಷಿ ಚಟುವಟಿಕೆಗಳಿಂದ ಸುದ್ದಿಯಲ್ಲಿದೆ. ಇದೀಗ ಗಿಡ ನೆಟ್ಟು ಫಲ ನೀಡುತ್ತಿದೆ. ಸುಮಾರು 60 ಮರಗಳಲ್ಲಿ ಅಡಕೆ ಫಲಬಿಡುವ ಹಂತದಲ್ಲಿದೆ. ಇದು ಕಡೇಶಿವಾಲಯ ಪೆರ್ಲಾಪು ಶಾಲೆಯ ಯಶೋಗಾಥೆ.

ವಿಶೇಷವಾಗಿ ದ್ರಾಕ್ಷಿಯ ಚಪ್ಪರ, ಆಹ್ಲಾದಕರ ವಾತಾವರಣ ಮೂಡಿಸುವ ಔಷಧೀಯ ಸಸ್ಯಗಳ ವನ ಇಲ್ಲಿವೆ. ಜೊತೆಗೆ ವಾಣಿಜ್ಯ ಬೆಳೆಯಾದ ಅಡಕೆಯ 60 ಗಿಡಗಳು ಈಗ ಮರವಾಗುತ್ತಿವೆ. ಹಣ್ಣು, ತರಕಾರಿಗಳನ್ನು ಬೆಳೆಸಲಾಗುತ್ತದೆ. ಶಾಲೆಯ ಪರಿಸರ ಕ್ಲಬ್ ಸಹಿತ ಮಕ್ಕಳೆಲ್ಲರಿಗೂ ಇವುಗಳೊಂದಿಗೆ ಬೆರೆಯುವ ಸಂಭ್ರಮವನ್ನು ಶಾರೀರಿಕ ಶಿಕ್ಷಣ ಶಿಕ್ಷಕ ಭಾಸ್ಕರ ನಾಯ್ಕ್ ನೇತೃತ್ವದಲ್ಲಿ ಮುಖ್ಯಶಿಕ್ಷಕಿ ಉಮಾವತಿ ಹಾಗೂ ಶಿಕ್ಷಕರು ಕಲಿಸಿಕೊಟ್ಟಿದ್ದಾರೆ. ತೋಟದಲ್ಲಿ ಪ್ರತ್ಯೇಕವಾಗಿ ಔಷಧೀಯ ವನವನ್ನೂ ನಿರ್ಮಿಸಲಾಗಿದ್ದು, ಇಲ್ಲಿ ಸಾಕಷ್ಟು ಬಗೆಯ ಔಷಧೀಯ ಗಿಡವನ್ನು ನೆಟ್ಟು ಮಕ್ಕಳಿಗೆ ಅದರ ಮಹತ್ವವನ್ನು ತಿಳಿಸಿಕೊಡಲಾಗುತ್ತಿದೆ.

ಜಾಹೀರಾತು

ಕೃಷಿ ನನ್ನ ಹವ್ಯಾಸ. ಮಕ್ಕಳಿಗೂ ಇದರ ಪಾಠ ಮಾಡುವ ಮೂಲಕ ಅವರಲ್ಲೂ ಆಸಕ್ತಿ ಬೆಳೆಯಲು ಕೈತೋಟ ಕಾರಣವಾಯಿತು. ಹಲವು ಹಿರಿಯ ವಿದ್ಯಾರ್ಥಿಗಳು ತಮ್ಮ ಮನೆಯಲ್ಲಿ ಕೈತೋಟ ಮಾಡುವುದಕ್ಕೆ ನಮ್ಮ ಶಾಲೆಯ ಕೈತೋಟ ಪ್ರೇರಣೆಯಾಗಿದೆ. ಗಿಡ ನೆಟ್ಟವರು ಇಂದು ಕಾಲೇಜಿಗೆ ಹೋಗುತ್ತಿದ್ದಾರೆ, ಆದರೂ ಪ್ರೀತಿಯಿಂದ ಇಲ್ಲಿಗೆ ಬಂದು ಗಿಡದ ಬೆಳವಣಿಗೆ ನೋಡುತ್ತಿದ್ದಾರೆ ಎನ್ನುತ್ತಾರೆ ದೈಹಿಕ ಶಿಕ್ಷಣ ಶಿಕ್ಷಕ ಭಾಸ್ಕರ ನಾಯ್ಕ್

ನಮ್ಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಭಾಸ್ಕರ ನಾಯ್ಕ್ ಅವರು ವಿಶೇಷ ಮುತುವರ್ಜಿಯಿಂದ ಮಕ್ಕಳಲ್ಲಿ ಕೃಷಿಯಲ್ಲಿ ಆಸಕ್ತಿ ಮೂಡಿಸುವಂತೆ ಇಡೀ ಶಾಲೆಯ ಪರಿಸರವನ್ನು ಸಮೃದ್ಧ ಕೃಷಿಯುಕ್ತವನ್ನಾಗಿಸಿದ್ದಾರೆ. ಶಿಕ್ಷಕರು, ಮಕ್ಕಳು, ಪೋಷಕರ ಪ್ರೋತ್ಸಾಹದಿಂದ ಶಾಲೆ ಕೈತೋಟ ಗಮನ ಸೆಳೆಯುವಂತಾಗಿದೆ ಎನ್ನುತ್ತಾರೆ ಮುಖ್ಯ ಶಿಕ್ಷಕಿ ಉಮಾವತಿ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಔಷಧೀವನ, ಅಡಕೆ ತೋಟ – ಪೆರ್ಲಾಪುವಿನಲ್ಲಿರುವ ಕಡೇಶಿವಾಲಯದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕೃಷಿ ಪಾಠ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*