Categories: Uncategorized

ಬಂಟ್ವಾಳ ತಾಲೂಕಿನ ಎರಡು ಕಡೆ ಕಸಾಪ ಚುನಾವಣಾ ಮತದಾನ ಕೇಂದ್ರ

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಕಡೆಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮತದಾನ ಕೇಂದ್ರಗಳನ್ನು ರಚಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ನವೆಂಬರ್ 21ರಂದು ನಡೆಯಲಿದ್ದು, ಬಂಟ್ವಾಳ ಮಿನಿ ವಿಧಾನಸೌಧದಲ್ಲಿ 1 ಹಾಗೂ ವಿಟ್ಲ ಪಟ್ಟಣ ಪಂಚಾಯಿತಿಯಲ್ಲಿ 1 ಹೀಗೆ ಒಟ್ಟು 2 ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ತಹಸೀಲ್ದಾರ್ ರಶ್ಮಿ ಎಸ್.ಆರ್. ತಿಳಿಸಿದ್ದಾರೆ.

ಮತದಾನವು ಬೆಳಗ್ಗೆ 8ರಿಂದ ಸಂಜೆ 4 ಗಂಟೆವರೆಗೆ ನಡೆಯಲಿದೆ. ಮಿನಿ ವಿಧಾನಸೌಧದ ಮತಗಟ್ಟೆಯಲ್ಲಿ 247 ಮತದಾರರು ವಿಟ್ಲ ಪಟ್ಟಣ ಪಂಚಾಯಿತಿಯಲ್ಲಿ 168 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಮತದಾನ ಮುಗಿದ ಬಳಿಕ ಅದೇ ಕೇಂದ್ರದಲ್ಲಿ ಮತ ಎಣಿಕೆ ಮಾಡಿ ಅಭ್ಯರ್ಥಿಗಳು ಪಡೆದ ಮತಗಳ ಅಂಕಿ, ಅಂಶಗಳನ್ನು ಜಿಲ್ಲಾ ಕೇಂದ್ರಕ್ಕೆ ಕಳುಹಿಸಲಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯಾಧ್ಯಕ್ಷ ಮತ್ತು ಜಿಲ್ಲಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮಂಗಳೂರಿನ ಎಂ.ಆರ್.ವಾಸುದೇವ ಮತ್ತು ಉಜಿರೆಯ ಡಾ. ಎಂ.ಪಿ.ಶ್ರೀನಾಥ್ ಸ್ಪರ್ಧೆಗಿಳಿದಿದ್ದಾರೆ. ಈಗಾಗಲೇ ಇಬ್ಬರೂ ಅಭ್ಯರ್ಥಿಗಳು ಮತಯಾಚಣೆ ಮಾಡಿದ್ದು, ಅವರ ಬೆಂಬಲಿಗರೂ ಮತಯಾಚನೆ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಹಾಗೂ ವೈಯಕ್ತಿಕ ಭೇಟಿ ಮೂಲಕ ಮತಯಾಚನೆಗಳು ನಡೆಯುತ್ತಿವೆ. ಮತದಾರರ ಪಟ್ಟಿಯಲ್ಲಿ ಇರುವವರಲ್ಲಿ ಕೆಲವರು ಈಗ ಮೃತಪಟ್ಟಿದ್ದರೆ, ಕೆಲವರು ಊರಲ್ಲಿಲ್ಲ ಎಂಬುದೂ ಇಲ್ಲಿ ಗಮನಾರ್ಹ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.