ಕಾರಿಂಜ ರಕ್ಷಣೆಗೆ ಹಿಂಜಾವೇ ಪಣ: 21ರಂದು ಜನಜಾಗೃತಿ ಸಭೆ

ಬಂಟ್ವಾಳ: ತಾಲೂಕಿನ ಐತಿಹಾಸಿಕ ಹಿನ್ನಲೆಯ ಶ್ರೀ ಕ್ಷೇತ್ರ ಕಾರಿಂಜದ ಸಂರಕ್ಷಣೆಗೆ ಹಿಂದೂ ಜಾಗರಣ ವೇದಿಕೆಯ ಬಂಟ್ವಾಳ ತಾಲೂಕು ಘಟಕದ ವತಿಯಿಂದ ರುದ್ರಗಿರಿಯ ರಣಕಹಳೆ ಕಾರಿಂಜ ಕ್ಷೇತ್ರದ ಕಡೆಗೆ ಜಾಗರಣದ ವೀರ ನಡಿಗೆ ಜನಜಾಗೃತಿ ಸಭೆ ನ.21ರಂದು ಅಪರಾಹ್ನ ನಡೆಯಲಿದೆ ಎಂದು ಹಿಂದು ಜಾಗರಣಾ ವೇದಿಕೆಯ ಹಿರಿಯ ಮುಖಂಡ ರಾಧಾಕೃಷ್ಣ ಅಡ್ಯಂತಾಯ ಹೇಳಿದ್ದಾರೆ.

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಧ್ಯಾಹ್ನ 2.30ರಿಂದ ವಗ್ಗ ಕೇಂದ್ರಸ್ಥಾನದಿಂದ  ಕಾರ್ಯಕರ್ತರು ಹಾಗೂ ಹಿಂದೂ ಸಮಾಜದ ಬಂಧುಗಳು ಸಾವಿರಾರು ಸಂಖ್ಯೆಯಲ್ಲಿ ಕಾಲ್ನಡಿಗೆಯ ಮೂಲಕ ಶ್ರೀ ಕಾರಿಂಜೇಶ್ವರ ಕ್ಷೇತ್ರಕ್ಕೆ ತೆರಳಲಿದ್ದಾರೆ ಎಂದರು.ದೇವಳದ ರಥಬೀದಿಯಲ್ಲಿ ಶೋಭಾಯಾತ್ರೆ ಸಂಪನ್ನಗೊಳ್ಳಲಿದ್ದು,ಬಳಿಕ ನಡೆಯುವ ಬೃಹತ್ ಜನಜಾಗೃತಿ ಸಭೆಯನ್ನುದ್ದೇಶಿಸಿ ಕ್ಷೇತ್ರಿಯ ಸಂಘಟನಾ ಕಾರ್ಯದರ್ಶಿ ಜಗದೀಶ ಕಾರಂತ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಬಂಟ್ವಾಳ ತಾ.ಘಟಕದ ಕಾರ್ಯದರ್ಶಿ ಪದ್ಮನಾಭ ಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು. ಸುಮಾರು 6 ಕಿ.ಮೀ.ಪ್ರದೇಶದಲ್ಲಿ ವ್ಯಾಪಿಸಿರುವ ಕಾರಿಂಜ ದೇವಳದ ಅಸ್ತಿತ್ವಕ್ಕೆ ಗಂಡಾಂತರ ಉಂಟಾಗಿದೆ, ಗಣಿಗಾರಿಕೆ ಅಕ್ರಮವಾಗಿ ನಡೆಯುತ್ತಿದೆ, ಪಾವಿತ್ರ್ಯತೆಗೆ ಧಕ್ಕೆ ಉಂಟಾಗುತ್ತಿದೆ ಎಂದು ಅವರು ಆರೋಪಿಸಿದರು. ಹಿಂದೂ ಸಮಾಜವನ್ನು ಬಡಿದೆಬ್ಬಿಸಿ,ಪವಿತ್ರ ಕಾರಿಂಜ ಕ್ಷೇತ್ರದ ರಕ್ಷಣೆಗಾಗಿ ಜನಜಾಗೃತಿಯ ಮೂಲಕ ಈ ರಣಕಹಳೆ ಮೊಳಗಿಸಲಾಗತ್ತದೆ ಎಂದರು. ಪ್ರಮುಖರಾದ ಜಗದೀಶ್ ನೆತ್ತರಕೆರೆ,ತಿರುಲೇಶ್ ಬೆಳ್ಳೂರು,ಬಾಲಕೃಷ್ಣ ಕಲಾಯಿ,ಪ್ರಶಾಂತ್ ಕೆಂಷುಗುಡ್ಡೆ,ಯೋಗೀಶ್,ರವಿ ಕೆಂಪುಗುಡ್ಡೆ, ತಿಲಕ್ ಅಮ್ಟಾಡಿ,ಚಂದ್ರಕಲಾಯಿ ಮೊದಲಾದವರಿದ್ದರು. 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಾರಿಂಜ ರಕ್ಷಣೆಗೆ ಹಿಂಜಾವೇ ಪಣ: 21ರಂದು ಜನಜಾಗೃತಿ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*