ಸರ್ಕಾರಿ ಮಾಹಿತಿ

ಕಾರಿಂಜದಲ್ಲಿ ಜನಜಾಗೃತಿ ಸಭೆ: ಇಂದು ಮದ್ಯದಂಗಡಿ ಬಂದ್ – ಜಿಲ್ಲಾಧಿಕಾರಿ ಆದೇಶ

ಡಾ. ಕೆ.ವಿ.ರಾಜೇಂದ್ರ

ಬಂಟ್ವಾಳ: ಭಾನುವಾರ ಬೆಳಗ್ಗೆ 10ರಿಂದ ರಾತ್ರಿ 12ರವರೆಗೆ ಬಂಟ್ವಾಳದ ಹಲವೆಡೆ ಮದ್ಯದಂಗಡಿಗಳು ಬಂದ್ ಆಗಲಿವೆ. ಕಾರಿಂಜದಲ್ಲಿ ಹಿಂದು ಜಾಗರಣಾವೇದಿಕೆಯ ಜನಜಾಗೃತಿ ಸಭೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ಆದೇಶವನ್ನು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಹೊರಡಿಸಿದ್ದಾರೆ.

ನ. 21ರ ಭಾನುವಾರ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 12 ಗಂಟೆವರೆಗೆ ಬಂಟ್ವಾಳ ನಗರ ಪೆÇಲೀಸ್ ಠಾಣಾ ವ್ಯಾಪ್ತಿಯ ಬಿ.ಸಿ ರೋಡ್, ಪಾಣೆಮಂಗಳೂರು, ಬಂಟ್ವಾಳ ಕಸಬ ಮತ್ತು ಅಮ್ಟಾಡಿ ಗ್ರಾಮ, ನರಿಕೊಂಬು, ಸಜಿಪ ಮೂಡ ಮತ್ತು ಸಜಿಪ ಮುನ್ನೂರು ಗ್ರಾಮ, ಗೊಳ್ತಮಜಲು ಮತ್ತು ಅಮ್ಟೂರು ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಕಾವಳಪಡೂರು ಮತ್ತು ಪುಂಜಾಲಕಟ್ಟೆ ಪೊಲೀಸ್ ಠಾಣಾ ಸರಹದ್ದುಗಳ ಮಾಲಾಡಿ, ಪಾರೆಂಕಿ, ಉಳಿ, ಪಿಲಾತಬೆಟ್ಟು, ಬಡಗಕಜೆಕಾರು, ಚೆನ್ನೈತ್ತೋಡಿ ಹಾಗೂ ಎಲಿಯನಡುಗೋಡು ವ್ಯಾಪ್ತಿಯ ಎಲ್ಲಾ ಬಾರ್, ವೈನ್ ಶಾಪ್, ಮದ್ಯಮಾರಾಟ ಮಳಿಗೆಗಳನ್ನು ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಕರ್ನಾಟಕ ಅಬಕಾರಿ ಕಾಯಿದೆ 1965ರ ಸೆಕ್ಷನ್ 21(1)ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಆದೇಶ ಹೊರಡಿಸಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.