ಪುಂಜಾಲಕಟ್ಟೆ

ಕಾರಿಂಜದಲ್ಲಿ ರುದ್ರಗಿರಿಯ ರಣಕಹಳೆ: ಬೇಡಿಕೆ ಈಡೇರಿಕೆಗೆ ಗಡುವು ನೀಡಿದ ಹಿಂಜಾವೇ

ಬಂಟ್ವಾಳ: ಬಂಟ್ವಾಳ ತಾಲೂಕಿನ ಕಾರಿಂಜದಲ್ಲಿ ಹಿಂದು ಜಾಗರಣಾ ವೇದಿಕೆಯ ವತಿಯಿಂದ ಭಾನುವಾರ ರುದ್ರಗಿರಿಯ ರಣಕಹಳೆ ಎಂಬ ಜನಜಾಗೃತಿ ಸಮಾವೇಶ ನಡೆದಿದ್ದು, ಈ ಸಂದರ್ಭ ವಿವಿಧ ಬೇಡಿಕೆ ಈಡೇರಿಕೆಗೆ ಡಿ.21ರ ಗಡುವನ್ನು ಹಿಂದೂ ಜಾಗರಣ ವೇದಿಕೆ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ ಕಾರಂತ ನೀಡಿದ್ದಾರೆ.

ಕಾರಿಂಜ ದೇವಸ್ಥಾನದ ರಥಬೀದಿಯಲ್ಲಿ ನಡೆದ ಸಭೆಯಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, ದೇವಸ್ಥಾನ ದ ಪರಿಸರವನ್ನು ಧಾರ್ಮಿಕ ವಲಯವನ್ನಾಗಿ ಘೋಷಿಸಬೇಕು. ಭಕ್ತರ ಅನುಕೂಲತೆಗಾಗಿ ಮುಂದಿನ ಶಿವರಾತ್ರಿಗೆ ಶಿವಮಾಲೆ ಧಾರಣೆ ನಡೆಸಿ ಎಲ್ಲೆಡೆಯಿಂದ ಭಕ್ತರಿಗೆ ಬರಲು ಅನುವು ಮಾಡಿಕೊಡಬೇಕು. ದೇವಸ್ಥಾನ ಕ್ಕೆ ಅನ್ಯಧರ್ಮೀಯರ ಪ್ರವೇಶ ನಿಷೇಧಿಸಬೇಕು. ಪ್ರವಾಸೋದ್ಯಮ ದ ಹೆಸರಿನಲ್ಲಿ ದೇವಸ್ಥಾನ ದ ಪಾವಿತ್ರ್ಯತೆ ಕೆಡಿಸಬಾರದು. ದೇವಸ್ಥಾನದ ಪರಿಸರದಲ್ಲಿ ನಡೆಯುವ ಗಣಿಗಾರಿಕೆಯನ್ನು ಜಿಲ್ಲಾಡಳಿತ ತತ್ ಕ್ಷಣ ನಿಲ್ಲಿಸಬೇಕು. ಗೋಮಾಳ ಪ್ರದೇಶವನ್ನು ದೇವಸ್ಥಾನದ ಸುಪರ್ದಿಗೆ ಬಿಟ್ಟು ಕೊಡಬೇಕು ಎಂದರು.  ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ ಬಂಟ್ವಾಳ ಘಟಕದ ಕಾರ್ಯದರ್ಶಿ ಪದ್ಮನಾಭ ಮಯ್ಯ ಅಧ್ಯಕ್ಷ ತೆ ವಹಿಸಿದ್ದರು.

ಕಾರ್ಯಕ್ರಮಕ್ಕೆ  ಪೂರ್ವಭಾವಿಯಾಗಿ ವಗ್ಗ ಜಂಕ್ಷನ್‌ನಿಂದ ದೇವಸ್ಥಾನದ ವರೆಗೆ ಕಾಲ್ನಡಿಗೆಯ ಶೋಭಾಯಾತ್ರೆ ನಡೆಯಿತು. ತಾಲೂಕಿನ ವಿವಿಧೆಡೆಯಿಂದ ಆಗಮಿಸಿದ ಸಾವಿರಾರು ಕಾರ್ಯಕರ್ತರ ವಾಹನ ರ‍್ಯಾಲಿ ವಗ್ಗ ಜಂಕ್ಷನ್‌ನಲ್ಲಿ ಸಮಾವೇಶಗೊಂಡು ಪಾದಯಾತ್ರೆಯಲ್ಲಿ ಭಾಗವಹಿಸಿದರು.

ಜಾಹೀರಾತು

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಕಾರಿಂಜ ದೇವಸ್ಥಾನದ ಗ್ರಾಮಾಣಿ ವೆಂಕಟರಮಣ ಮುಚ್ಚಿನ್ನಾಯ ಹಾಗೂ ಪ್ರಮುಖರು ತೆಂಗಿನಕಾಯಿ ಒಡೆದು ಪಾದಯಾತ್ರೆಗೆ ಚಾಲನೆ ನೀಡಿದರು. ಹಿಂಜಾವೇ ಪುತ್ತೂರು ಜಿಲ್ಲಾ ಸಂಪರ್ಕ ಪ್ರಮುಖ್ ನರಸಿಂಹ ಮಾಣಿ, ಜಿಲ್ಲಾಧ್ಯಕ್ಷ ಜಗದೀಶ್ ನೆತ್ತರಕೆರೆ, ಬಂಟ್ವಾಳ ತಾಲೂಕು ಅಧ್ಯಕ್ಷ ತಿರುಲೇಶ್ ಬೆಳ್ಳೂರು, ಕಾರಿಂಜ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಪುಳಿಮಜಲು ಮತ್ತು ಸದಸ್ಯರು,   ಕಾವಳಮೂಡೂರು ಗ್ರಾ.ಪಂ.ಉಪಾಧ್ಯಕ್ಷ ಅಜಿತ್ ಶೆಟ್ಟಿ, ಜಿಲ್ಲಾ, ತಾಲೂಕು ಘಟಕಗಳ ಪ್ರಮುಖರು, ಪದಾಧಿಕಾರಿಗಳು ಮತ್ತಿತರರು ಭಾಗವಹಿಸಿದ್ದರು.

ಹಿಂದೂ ಜಾಗರಣ ವೇದಿಕೆಯ ಪ್ರಾಂತೀಯ ಕಾರ್ಯಕಾರಿಣಿ ಸದಸ್ಯ  ರಾಧಕೃಷ್ಣ ಅಡ್ಯಂತಾಯ ಪ್ರಾಸ್ತವಿಕವಾಗಿ ಮಾತನಾಡಿದರು.  ಹಿಂದೂ ಜಾಗರಣ ವೇದಿಕೆಯ ಬಂಟ್ವಾಳ ಘಟಕದ ಅಧ್ಯಕ್ಷ ತಿರುಲೇಶ್ ಬೆಳ್ಳೂರು,  ಪ್ರಮುಖರಾದ ಜಗದೀಶ್ ನೆತ್ತರಕೆರೆ ಮೊದಲಾದವರು ಉಪಸ್ಥಿತರಿದ್ದರು.  ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ