ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆ ಆರಂಭ: ಬಂಟ್ವಾಳ ತಾಲೂಕಿನ ಮತಗಟ್ಟೆಗಳಲ್ಲಿ ಮತದಾನಕ್ಕೆ ವೇಗ

ಬಂಟ್ವಾಳನ್ಯೂಸ್ ವರದಿ

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಮತ್ತು ಜಿಲ್ಲಾಧ್ಯಕ್ಷ ಚುನಾವಣೆ ಇಂದು ನಡೆಯುತ್ತಿದ್ದು, ಬಂಟ್ವಾಳ ತಾಲೂಕಿನ ಎರಡು ಮತಗಟ್ಟೆಗಳಾದ ಬಿ.ಸಿ.ರೋಡಿನ ಮಿನಿ ವಿಧಾನಸೌಧ ಮತ್ತು ವಿಟ್ಲ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಮತದಾನಕ್ಕೆ ವೇಗ ದೊರಕಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮತ್ತು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಪ್ರತ್ಯೇಕ ಮತಪತ್ರಗಳನ್ನು ನೀಡಲಾಗುತ್ತಿದ್ದು, ಮತದಾರರು ತಮ್ಮ ಕಸಾಪ ಗುರುತಿನ ಚೀಟಿ ಅಥವಾ ತಮ್ಮ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿಯನ್ನು ತರಬೇಕಾಗಿದ್ದು, ಕಸಾಪ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿದ್ದರೆ, ಮತದಾನ ಮಾಡಬಹುದಾಗಿದೆ. ವಿಟ್ಲ ಹೋಬಳಿಯವರಿಗೆ ವಿಟ್ಲದಲ್ಲಿ ಬಂಟ್ವಾಳ ದವರಿಗೆ ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ಮತದಾನ ಮಾಡಲು ಅವಕಾಶವಿದೆ.

ಮತದಾನಸಂಜೆ 4 ಗಂಟೆವರೆಗೆ ನಡೆಯಲಿದೆ. ಮಿನಿ ವಿಧಾನಸೌಧದ ಮತಗಟ್ಟೆಯಲ್ಲಿ 247 ಮತದಾರರು ವಿಟ್ಲ ಪಟ್ಟಣ ಪಂಚಾಯಿತಿಯಲ್ಲಿ 168 ಮತದಾರರು ತಮ್ಮ ಹಕ್ಕು ಚಲಾಯಿಸಲು ಅವಕಾಶವಿದೆ. ಮತದಾನ ಮುಗಿದ ಬಳಿಕ ಅದೇ ಕೇಂದ್ರದಲ್ಲಿ ಮತ ಎಣಿಕೆ ಮಾಡಿ ಅಭ್ಯರ್ಥಿಗಳು ಪಡೆದ ಮತಗಳ ಅಂಕಿ, ಅಂಶಗಳನ್ನು ಜಿಲ್ಲಾ ಕೇಂದ್ರಕ್ಕೆ ಕಳುಹಿಸಲಾಗುತ್ತದೆ. ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮಂಗಳೂರಿನ ಎಂ.ಆರ್.ವಾಸುದೇವ ಮತ್ತು ಉಜಿರೆಯ ಡಾ. ಎಂ.ಪಿ.ಶ್ರೀನಾಥ್ ಸ್ಪರ್ಧೆಗಿಳಿದಿದ್ದಾರೆ. ಈಗಾಗಲೇ ಇಬ್ಬರೂ ಅಭ್ಯರ್ಥಿಗಳು ಮತಯಾಚಣೆ ಮಾಡಿದ್ದು,ಸಾಮಾಜಿಕ ಜಾಲತಾಣಗಳ ಮೂಲಕ ಹಾಗೂ ವೈಯಕ್ತಿಕ ಭೇಟಿ ಮೂಲಕ ಮತಯಾಚನೆಗಳು ನಡೆದಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆ ಆರಂಭ: ಬಂಟ್ವಾಳ ತಾಲೂಕಿನ ಮತಗಟ್ಟೆಗಳಲ್ಲಿ ಮತದಾನಕ್ಕೆ ವೇಗ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*