ಕಲ್ಲಡ್ಕ

ನ.27: ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಬಂಟ್ವಾಳ :  ಮಾಣಿ‌ ಬಾಲವಿಕಾಸ‌ ಆಂಗ್ಲಮಾಧ್ಯಮ ಶಾಲೆಯ  ನೂತನ ಕಟ್ಟಡವು  ಮಾಣಿ ಜಂಕ್ಷನ್ ನಿಂದ 600 ಮೀಟರ್ ದೂರದ  ವಿದ್ಯಾನಗರ ಪಾಳ್ಯದಲ್ಲಿ  ನಿರ್ಮಾಣಗೊಳ್ಳಲಿದ್ದು, ನ.27 ರಂದು ಶಿಲಾನ್ಯಾಸ ನೆರವೇರಲಿದೆ ಎಂದು  ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಆಡಳಿತಾಧಿಕಾರಿ ಸಿ.ಶ್ರೀಧರ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 1989 ರಲ್ಲಿ ಶ್ರೀ ವಿದ್ಯಾ ಆಂಗ್ಲಮಾಧ್ಯಮ ಶಾಲೆ ಎನ್ನುವ ಹೆಸರಿನಲ್ಲಿ ಆರಂಭಗೊಂಡು ನಂತರದ ದಿನಗಳಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ ಎಂದು ಹೆಸರು ಪಡೆದುಕೊಂಡು ಕಳೆದ 32  ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತರವಾದ  ಸಾಧನೆಯೊಂದಿಗೆ ಕಾರ್ಯನಿರ್ವಹಿಸುತ್ತಿದ್ದು, ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವಿದ್ಯಾರ್ಜನೆಗೈಯುತ್ತಿದ್ದಾರೆ ಎಂದರು.

 ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ಕಾಮಗಾರಿಗಾಗಿ ಸದ್ರಿ ಶಾಲಾ ಕಟ್ಟಡವನ್ನು ತೆರವುಗೊಳಿಸಬೇಕಾಗಿದ್ದು, ಈ ಹಿನ್ನೆಲೆಯಲ್ಲಿ ಇಲ್ಲಿಗೆ ಸಮೀಪದ  ಮಾಣಿ-ಮೈಸೂರು ರಸ್ತೆಯ ವಿದ್ಯಾನಗರ ಪಾಳ್ಯದಲ್ಲಿ 12 ಕೋಟಿ ರೂ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಿಸಲು  ಶಾಲಾ ಆಡಳಿತ ಮಂಡಳಿ ಯೋಜನೆ  ರೂಪಿಸಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಸಾರವಾಗಿಯೇ ನೂತನ ಕಟ್ಟಡದ ತರಗತಿ ಕೋಣೆಗಳನ್ನು ವಿನ್ಯಾಸಗೊಳಿಸಲಾಗಿದ್ದು  ಮುಂದಿನ ಜೂನ್ ಗೆ ನೂತನ ಕಟ್ಟಡದಲ್ಲಿಯೇ ಶಾಲೆ ಮುನ್ನಡೆಸಬೇಕೆಂಬ ಇರಾದೆ ಇರಿಸಿಕೊಳ್ಳಲಾಗಿದೆ ಎಂದವರು ತಿಳಿಸಿದರು. ಶನಿವಾರ ಅಪರಾಹ್ನ 12 ಗಂಟೆಗೆ ನಡೆಯಲಿದ್ದು ಪುತ್ತೂರು ಅಂಬಿಕಾ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ  ಅಧ್ಯಕ್ಷತೆಯಲ್ಲಿ ನಡೆಯುವ  ಸಮಾರಂಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್  ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸುವರು. ಪಿ.ಎಸ್.ಸಚ್ಚಿದಾನಂದ ರೈ ಪಾಳ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು. ಮಾದರಿ ಶಾಲೆಯ ಕಲ್ಪನೆಯಲ್ಲಿ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ಪೂರಕವಾಗಿ ಪಠ್ಯ ಹಾಗೂ ಸಹ ಪಠ್ಯಚಟುವಟಿಕೆಗಳನ್ನೂ ಅಳವಡಿಸಲಾಗಿದೆ. ಯೋಗ, ನಾಟಕ, ಯಕ್ಷಗಾನ, ಸಂಗೀತ, ಭರತನಾಟ್ಯ ಮೊದಲಾದ ಕಲೆಗಳ ಕುರಿತಾಗಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ ಎಂದವರು ಹೇಳಿದರು.

ಜಾಹೀರಾತು

ಪತ್ರಿಕಾಗೋಷ್ಠಿಯಲ್ಲಿ  ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಬಿ.ಎಸ್.ನಾಯ್ಕ್, ಟ್ರಸ್ಟಿ ಪುಷ್ಪರಾಜ ಹೆಗ್ಡೆ,  ಹಿರಿಯ ವಿದ್ಯಾರ್ಥಿ ಸಂಘದ  ಅಧ್ಯಕ್ಷ ಮಹೇಶ್ ಶೆಟ್ಟಿ, ಶಾಲಾ ಮುಖ್ಯ ಶೈಕ್ಷಣಿಕ ಅಧಿಕಾರಿ ರವೀಂದ್ರ ಡಿ. ,‌ಶಾಲಾ ಮುಖ್ಯ ಶಿಕ್ಷಕಿ‌ ವಿಜಯಲಕ್ಷ್ಮೀ‌ ವಿ.ಶೆಟ್ಟಿ ಮೊದಲಾದವರು‌ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ