ಬಂಟ್ವಾಳ

ಭರವಸೆ ಈಡೇರಿಸುವ ಕಾರ್ಯ, ರಾಜ್ಯದಲ್ಲೇ ಮಾದರಿ ಜಿಲ್ಲಾ ಘಟಕ: ಬಿ.ಸಿ.ರೋಡಿನಲ್ಲಿ ಕಸಾಪ ಜಿಲ್ಲಾಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್

ಬಂಟ್ವಾಳ: ದ.ಕ.ಜಿಲ್ಲೆಯ ಸಾಹಿತ್ಯಾಸಕ್ತರು ತನ್ನ ಮೇಲೆ ಭರವಸೆ ಇಟ್ಟು ಜಿಲ್ಲಾ ಕಸಾಪ ಅಧ್ಯಕ್ಷರಾಗಿ ಗೆಲ್ಲಿಸುವ ಕಾರ್ಯ ಮಾಡಿದ್ದು, ತಾನು ಹಿಂದೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಿ ಜಿಲ್ಲಾ ಪರಿಷತ್ತನ್ನು ಮಾದರಿ ಸಾಹಿತ್ಯ ಪರಿಷತ್ತಾಗಿ ರಾಜ್ಯದಲ್ಲೇ ಗುರುತಿಸುವಂತೆ ಕಾರ್ಯ ಮಾಡುವ ಪ್ರಯತ್ನ ಮಾಡಲಿದ್ದೇನೆ ಎಂದು ಕಸಾಪ ನೂತನ ಜಿಲ್ಲಾಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಎಂ.ಪಿ.ಹೇಳಿದರು.

ಅವರು ಶನಿವಾರ ಸಂಜೆ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ಸನ್ನಿಧಿಯಲ್ಲಿ ಬಂಟ್ವಾಳದ ಸಾಹಿತ್ಯಾಸಕ್ತರು ಸೇರಿ ಮಾಡಿದ ಗೌರವಾರ್ಪಣೆಯನ್ನು ಸ್ವೀಕರಿಸಿ ಮಾತನಾಡಿದರು. ತಾಲೂಕು ಅಧ್ಯಕ್ಷರ ಆಯ್ಕೆಯ ಬಳಿಕ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳ ಸಾಹಿತ್ಯ ಚಟುವಟಿಕೆಗಳನ್ನು ಬೆಂಬಲಿಸುವ ಕಾರ್ಯದ ಜತೆಗೆ ಎಲ್ಲಾ ಚಟುವಟಿಕೆಗಳು ಆರಂಭಗೊಳ್ಳಲಿದೆ ಎಂದರು. ಬಂಟ್ವಾಳ ತಾಲೂಕು ಕಸಾಪ ಅಧ್ಯಕ್ಷ ಮೋಹನ್ ರಾವ್, ತಾಲೂಕು ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ, ಪ್ರಮುಖರಾದ ಸರಪಾಡಿ ಅಶೋಕ ಶೆಟ್ಟಿ, ವಿಶ್ವನಾಥ್ ಬಂಟ್ವಾಳ, ಸುಭಾಶ್ಚಂದ್ರ ಜೈನ್, ರವೀಂದ್ರ ಕುಕ್ಕಾಜೆ, ವಿ.ಸು.ಭಟ್, ಶಾಂತಾ ಕನ್ಯಾನ, ಶಿವಶಂಕರ್, ರಾಜಾ ಬಂಟ್ವಾಳ, ಪೂವಪ್ಪ ನೇರಳಕಟ್ಟೆ, ಶಿವಪ್ಪ ಪೂಜಾರಿ ಮೊದಲಾದವರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ