ಕಲ್ಲಡ್ಕ

ಜನಾರೋಗ್ಯವೇ ರಾಷ್ಟ್ರಶಕ್ತಿ: ಆಲಡ್ಕದಿಂದ ಗುಡ್ಡೆಯಂಗಡಿವರೆಗೆ ಮ್ಯಾರಥಾನ್

ಬಂಟ್ವಾಳ: ಜನಾರೋಗ್ಯವೇ ರಾಷ್ಟ್ರಶಕ್ತಿ ಎಂಬ ಅಭಿಯಾನದ ಅಂಗವಾಗಿ ರಾಷ್ಟ್ರಾದ್ಯಂತ ನಡೆಯುತ್ತಿರುವ ಮ್ಯಾರಥಾನ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಮೆಲ್ಕಾರ್  ಪಿಎಫ್ಐ ವತಿಯಿಂದ ಆಲಡ್ಕ ಜಂಕ್ಷನ್ ನಿಂದ ಗುಡ್ಡೆಯಂಗಡಿ ಜಂಕ್ಷನ್ ವರೆಗೆ ಮ್ಯಾರಥಾನ್ ನಡೆಯಿತು.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಇದರ ವಿಟ್ಲ ವಲಯದ ಅಧ್ಯಕ್ಷ ರಹೀಮ್ ಆಲಾಡಿ  ಧ್ವಜವನ್ನು ಸಪ್ವಾನ್ ಸಜಿಪ ಇವರಿಗೆ ಹಸ್ತಾಂತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗುಡ್ಡೆಅಂಗಡಿ ಜಂಕ್ಷನ್ ನಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮೆಲ್ಕಾರ್ ಅಧ್ಯಕ್ಷರಾದ ಅನ್ವಾರ್ ಆಲಡ್ಕ ವಹಿಸಿದ್ದರು

ವಿಟ್ಲ ವಲಯದ ಕಾರ್ಯದರ್ಶಿಯಾದ ಹನೀಪ್ ರಂತಡ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು.  ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮೆಲ್ಕಾರ್ ವಲಯದ ಅಧ್ಯಕ್ಷರಾದ ರಹಮಾನ್ ಮಠರವರು ಮಾತನಾಡಿ ಆರೋಗ್ಯದ ಬಗ್ಗೆ ಮತ್ತು ಆತ್ಮರಕ್ಷಣೆಯ ಪ್ರಾಮುಖ್ಯತೆ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಜ್ಜಾದ್ ರವರ ನೇತೃತ್ವದಲ್ಲಿ ದೈಹಿಕ ವ್ಯಾಯಾಮ ಅಭ್ಯಾಸ ಸಾರ್ವಜನಿಕವಾಗಿ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಸಜಿಪ ನಡು ಗ್ರಾಮ ಪಂಚಾಯಿತಿಯ ಸದಸ್ಯರಾದ ನಾಸಿರ್ ಸಜಿಪ ಹಾಗು ಮೆಲ್ಕಾರ್ ವಲಯ ಕಾರ್ಯದರ್ಶಿ ಮುಬಾರಕ್ ಕಾರಾಜೆ  ಉಪಸ್ಥಿತದ್ದರು. ಇರ್ಫಾನ್ ರಂತಡ್ಕ ಸ್ವಾಗತಿಸಿ ನಿರೂಪಿಸಿದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ