ಬಂಟ್ವಾಳ

ಬಂಟ್ವಾಳ ಕ್ಷೇತ್ರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಚುನಾವಣಾ ಪ್ರಚಾರ

ಬಂಟ್ವಾಳನ್ಯೂಸ್ ವರದಿ, www.bantwalnews.com REPORT

ಬಂಟ್ವಾಳ ವಿಧಾನಸಭಾ ಕ್ಷೇತ್ರದಾದ್ಯಂತ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಚುನಾವಣಾ ಪ್ರಚಾರ ಸಭೆಗಳು ಶನಿವಾರ ನಡೆಯಿತು. ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಬಿಜೆಪಿಯ ಬಂಟ್ವಾಳ ಮಂಡಲ ವತಿಯಿಂದ ಅಮ್ಟಾಡಿ ಮತ್ತು ಬಂಟ್ವಾಳ ಪುರಸಭೆಯ ಮಹಾಶಕ್ತಿ ಕೇಂದ್ರದ ಆಶ್ರಯದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆ ನಡೆಯಿತು.

ಶಾಸಕ ರಾಜೇಶ್ ನಾಯ್ಕ್ ಮಾತನಾಡಿ, ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೇವಲ ಬಿಜೆಪಿ ಬೆಂಬಲಿತರಿಂದಷ್ಟೇ ಅಲ್ಲ, ಇತರ ಪಕ್ಷಗಳಿಂದಲೂ ಬೆಂಬಲ ವ್ಯಕ್ತವಾಗುತ್ತಿದೆ ಎಂದರು. ಈ ಸಂದರ್ಭ ಮಾತನಾಡಿದ ಸಚಿವ ಕೋಟ, ನನಗೆ ನಾಲ್ಕನೇ ಬಾರಿ ಚುನಾವಣೆ ಸ್ಪರ್ಧೆ ಮಾಡಲು ಅವಕಾಶ ನೀಡಿದೆ. ಗ್ರಾಮ ಪಂಚಾಯತ್ ಸದಸ್ಯನಾಗಿದ್ದಾಗ 20 ರೂ. ಇದ್ದ ಪಂಚಾಯತ್ ಸದಸ್ಯರ ಗೌರವಧನ ಏರಿಕೆಯಾಗಿದೆ. ಅದನ್ನು 2000 ರೂ. ಏರಿಸಲು ಮನವಿ ಮಾಡಿದ್ದು ಅದು ಮುಂದಿನ ದಿನಗಳಲ್ಲಿ ಜಾರಿಗೆ ಬರಲಿದೆ ಎಂದರು.

ಜಾಹೀರಾತು

ಬಿಜೆಪಿ ರಾಜ್ಯಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಮತದಾನ ಪ್ರಕ್ರಿಯೆ ಕುರಿತು ಸ್ಪಷ್ಟ ಅರಿವು ಹೊಂದಿ, ಸಕಾಲದಲ್ಲಿ ಮತ ಚಲಾಯಿಸುವಂತೆ ಸೂಚನೆ ನೀಡಿದರು. ಇದೇ ವೇಳೆ ಆಮ್ಟಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಕಾಶ್ ಮತ್ತು ಸೌಮ್ಯ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಪಕ್ಷದ ನಾಯಕರು ಅವರಿಗೆ ಪಕ್ಷದ ಧ್ವಜವನ್ನು ಕೊಟ್ಟು ಪಕ್ಷಕ್ಕೆ ಬರಮಾಡಿಕೊಂಡರು.

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಪಕ್ಷ ಪ್ರಮುಖರಾದ ಉದಯ ಕುಮಾರ್ ಶೆಟ್ಟಿ, ಕೊರಗಪ್ಪ ನಾಯ್ಕ್, ಹರಿಕೃಷ್ಣ ಬಂಟ್ವಾಳ, ಸಂತೋಷ್ ರೈ ಬೋಳಿಯಾರ್, ಸತೀಶ್ ಕುಂಪಲ, ರಾಜೇಶ್ ಕಾವೇರಿ, ದೇವದಾಸ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ನಿತಿನ್ ಕುಮಾರ್, ಕಸ್ತೂರಿ ಪಂಜ, ಮಂಜುಳಾ ಆಚಾರ್ಯ, ಪೂಜಾ ಪೈ, ಈಶ್ವರ್ ಕಟೀಲು, ರಣದೀಪ್ ಕಾಂಚನ್ ಮತ್ತಿತರರು ಉಪಸ್ಥಿತರಿದ್ದರು. ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಸ್ವಾಗತಿಸಿದರು. ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ ಮತ್ತು ಬುಡ ಅಧ್ಯಕ್ಷ ದೇವದಾಸ ಶೆಟ್ಟಿ ಮತದಾನದ ಪ್ರಕ್ರಿಯೆ ಕುರಿತು ಮಾಹಿತಿ ನೀಡಿದರು. ಇನ್ನೋರ್ವ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಕಾರ್ಯಕ್ರಮ ನಿರ್ವಹಿಸಿದರು. ಕಿಶೋರ್ ಪಲ್ಲಿಪ್ಪಾಡಿ ವಂದೇ ಮಾತರಂ ಹಾಡಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.