ಬಂಟ್ವಾಳ

ಎಬಿವಿಪಿ ಬಂಟ್ವಾಳ ವತಿಯಿಂದ ಬಿ.ಸಿ.ರೋಡಿನಲ್ಲಿ ಸಾಮಾಜಿಕ ಸಾಮರಸ್ಯ ದಿನಾಚರಣೆ

ಬಂಟ್ವಾಳನ್ಯೂಸ್ ವರದಿ, www.bantwalnews.com REPORT

ಬಂಟ್ವಾಳ: ಎಬಿವಿಪಿ ಬಂಟ್ವಾಳ ವತಿಯಿಂದ ಬಿ.ಸಿ.ರೋಡಿನಲ್ಲಿ ಸಾಮಾಜಿಕ ಸಾಮರಸ್ಯ ದಿನಾಚರಣೆ ನಡೆಯಿತು. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಕಾರ್ಯಕರ್ತ ಸಂದೇಶ್ ರೈ ಮಜಕ್ಕಾರ್ ಆಗಮಿಸಿ ಸಾಮಾಜಿಕ ಸಾಮರಸ್ಯ ಮಹತ್ವ ಹಾಗೂ ಡಾ.ಬಿ.ಆರ್ .ಅಂಬೇಡ್ಕರ್ ನಡೆದು ಬಂದ ದಾರಿಯ ಮಹತ್ವವನ್ನು ತಿಳಿಸಿದರು. ಬಂಟ್ವಾಳ ತಾಲೂಕು ಸಂಚಾಲಕರಾದ ದಿನೇಶ್ ಕೊಯಿಲ, ತಾಲೂಕು ಸಹಸಂಚಾಲಕರಾದ ಅಖಿಲಾಷ್, ಎಸ್.ವಿ.ಎಸ್ ಕಾಲೇಜಿನ ಪದವಿ ಘಟಕ ಅಧ್ಯಕ್ಷರಾದ ಶ್ರೇಯಸ್, ಪದವಿಪೂರ್ವ ಘಟಕದ ಅಧ್ಯಕ್ಷರಾದ  ಕೀರ್ತನ್, ಪ್ರಮುಖರಾದ ಶಿವಪ್ರಸಾದ್, ಪ್ರತೀಕ್ ,ದೀರಜ್, ರಂಜಿತ್,  ಅನ್ವೇಶ್, ಭರತ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಸಮೀಕ್ಷಾ ಕಾರ್ಯಕ್ರಮ ನಿರೂಪಿಸಿದರು.  ಅನ್ವೇಶ್ ವಂದಿಸಿದರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.