ಬಂಟ್ವಾಳ

ಜಿಎಸ್ ಬಿ ಸಮಾಜ ಸೇವಾ ಸಮಿತಿ ವತಿಯಿಂದ ದುರ್ಗಾ ನಮಸ್ಕಾರ ಪೂಜೆ, ಪ್ರತಿಭಾ ಪುರಸ್ಕಾರ

ಬಂಟ್ವಾಳನ್ಯೂಸ್ ವರದಿ, www.bantwalnews.com REPORT

ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಮಿತಿ, ಬಿ.ಸಿ.ರೋಡು ಆಶ್ರಯದಲ್ಲಿ ಬಿ.ಸಿ.ರೋಡಿನ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ಶ್ರೀ ದುರ್ಗಾ ನಮಸ್ಕಾರ ಪೂಜೆ ನಡೆಯಿತು. ಸಭಾ ಕಾರ್‍ಯಕ್ರಮದಲ್ಲಿ ಮಂಗಳೂರು ಸರಕಾರಿ ಮಹಿಳಾ ಪಾಲಿಟೆಕ್ನಿಕ್, ಬೊಂದೇಲ್ ನಿವೃತ್ತ ಪ್ರಿನ್ಸಿಪಾಲ್ ಎ. ಕಲಾವತಿ ಕಾಮತ್ ಹಾಗೂ  ಪುತ್ತೂರಿನ ಸಾಮಾಜಿಕ ಕಾರ್‍ಯಕರ್ತೆ ಕೆ. ವತ್ಸಲಾ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ಅತಿ ಹೆಚ್ಚು ಅಂಕ ಪಡೆದ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಡಿಗ್ರಿ, ವೃತ್ತಿ ಶಿಕ್ಷಣ ಕೋರ್ಸುಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಮಿತಿ ವತಿಯಿಂದ ಚಿನ್ನದ ಪದಕವನ್ನು ನೀಡಿ ಪುರಸ್ಕರಿಸಲಾಯಿತು ಖ್ಯಾತ ಬಾಣಸಿಗರಾದ ನಾಗೇಶ್ ಎಸ್. ನಾಯಕ್, ದ.ಕ. ಜಿಲ್ಲಾ ಪ್ರಶಸ್ತಿ ಪುರಸ್ಕ್ರತ ವಿಜ್ಞಾನ ಶಿಕ್ಷಕರಾದ ಬಿ. ರಾಧಾಕೃಷ್ಣ ಬಾಳಿಗ ಹಾಗೂ ನಿವೃತ್ತ ಪ್ರಾಧ್ಯಾಪಕಿ ಪ್ರೇಮಲತಾ ಪೈ ಅವರನ್ನು ಸನ್ಮಾನಿಸಲಾಯಿತು.

ಜಾಹೀರಾತು

ಸಮಿತಿಯ ಅಧ್ಯಕ್ಷರಾದ ಯು. ಸುರೇಶ್ ನಾಯಕ್ ಸಭಾಧ್ಯಕ್ಷತೆಯನ್ನು ವಹಿಸಿದರು. ಸಮಿತಿಯ ದುರ್ಗಾದಾಸ್ ಶೆಣೈ, ಬಿ. ಕೃಷ್ಣ ನಾಯಕ್, ಬಿ. ವಾಸುದೇವ ಭಂಡಾರ್ಕರ್, ಪವನ್ ಕುಮಾರ್ ನಾಯಕ್, ನಾಗೇಂದ್ರ ನಾಯಕ್, ಕೆ. ರಘುವೀರ್ ಕಾಮತ್ ಹಾಗೂ ಇತರ ಸದಸ್ಯರು ಸಹಕರಿಸಿದರು. ಪ್ರಧಾನ ಕಾರ್ಯದರ್ಶಿ ಎಂ. ಸುಬ್ರಹ್ಮಣ್ಯ ಪೈ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ