ಬಂಟ್ವಾಳ

ಪತ್ರಕರ್ತ, ಬಂಟ್ವಾಳ ಜೇಸಿಯ ಪೂರ್ವಾಧ್ಯಕ್ಷ ಸಂದೀಪ್ ಸಾಲ್ಯಾನ್ ಅವರಿಗೆ ಜೇಸಿ ಭಾರತ ನೀಡುವ ರಾಷ್ಟ್ರೀಯ ಕಮಲಪತ್ರ ಪ್ರಶಸ್ತಿ ಪ್ರದಾನ

ಬಂಟ್ವಾಳನ್ಯೂಸ್ ವರದಿ, www.bantwalnews.com REPORT

ಬಂಟ್ವಾಳ: ಸಮಾಜಮುಖಿ ಸೇವೆಗಾಗಿ ಯುವ ಸಾಧಕರಿಗೆ ಜೇಸಿಐ ಭಾರತ ನೀಡುವ ರಾಷ್ಟ್ರೀಯ ಕಮಲ ಪತ್ರ ಪ್ರಶಸ್ತಿಯನ್ನು ಬಂಟ್ವಾಳ ಬಂಟರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತ ಹಾಗೂ ಬಂಟ್ವಾಳ ಜೇಸಿಯ ಪೂರ್ವಾಧ್ಯಕ್ಷ ಸಂದೀಪ್ ಸಾಲ್ಯಾನ್ ಪಡೆದರು.

ಶನಿವಾರ ಮತ್ತು ಭಾನುವಾರ ಬಂಟ್ವಾಳದ ಬಂಟರ ಭವನದಲ್ಲಿ ನಡೆದ ಜೇಸಿ ವಲಯ 15ರ ವಲಯ ಸಮ್ಮೇಳನದಲ್ಲಿ ಜೆಸಿಐ ರಾಷ್ಟೀಯ ಉಪಾಧ್ಯಕ್ಷ ಕವಿನ್ ಕುಮಾರ್, ಚಿತ್ರನಟ ಸಾಯಿ ಕುಮಾರ್, ವಲಯಾಧ್ಯಕ್ಷೆ ಸೌಜನ್ಯ ಹೆಗ್ಡೆ, ಜೆಸಿಐ ಬಂಟ್ವಾಳದ ಅಧ್ಯಕ್ಷ ಉಮೇಶ್ ಆರ್. ಮೂಲ್ಯ ಉಪಸ್ಥಿತಿಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಯಿತು. ಸಂದೀಪ್ ಸಾಲ್ಯಾನ್ ಅವರು ಕಳೆದ 15 ವರ್ಷದಿಂದ ಬಂಟ್ವಾಳದಲ್ಲಿ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದು ಹಲವಾರು ಸಮಾಜ ಮುಖಿ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಜೇಸಿಐ ಬಂಟ್ವಾಳದ ಸ್ಥಾಪಕ ಸದಸ್ಯರಾಗಿ, ಪೂರ್ವಧ್ಯಕ್ಷರಾಗಿ ಸೇವೆ ಸಲ್ಲಿಸಿರುವುದಲ್ಲದೆ ಸಂಸ್ಥೆಯ ಮೂಲಕ  ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.