ಬಂಟ್ವಾಳ

ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮೌಲಾನಾ ಎನ್.ಕೆ.ಎಂ ಶಾಫಿ ಸಅದಿ ಅವರಿಗೆ ದಾರುಲ್ ಅಶ್ಅರಿಯ ವಿದ್ಯಾ ಸಂಸ್ಥೆ ಸುರಿಬೈಲಿನಲ್ಲಿ ಸನ್ಮಾನ

ಬಂಟ್ವಾಳನ್ಯೂಸ್ ವರದಿ, www.bantwalnews.com REPORT

ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮೌಲಾನಾ ಎನ್.ಕೆ.ಎಂ  ಶಾಫಿ ಸಅದಿ ಬೆಂಗಳೂರು ರವರಿಗೆ ದಾರುಲ್ ಅಶ್ಅರಿಯ ವಿದ್ಯಾ ಸಂಸ್ಥೆ ಸುರಿಬೈಲಿನಲ್ಲಿ ಸನ್ಮಾನಿಸಲಾಯಿತು.

ಶೈಖುನಾ ವಾಲೆಮಂಡೋವ್ ಉಸ್ತಾದರ ಅಧ್ಯಕ್ಷತೆಯಲ್ಲಿ ಸುರಿಬೈಲು ಉಸ್ತಾದರ ಮಖಾಂ ಝಿಯಾರತ್ನೊಂದಿಗೆ ಚಾಲನೆಗೊಂಡ ಕಾರ್ಯಕ್ರಮದಲ್ಲಿ ದಾರುಲ್ ಅಶ್ಅರಿಯ ಜನರಲ್ ಮ್ಯಾನೇಜರ್ ಸಿ.ಎಚ್ ಮುಹಮ್ಮದ್ ಅಲಿ ಸಖಾಫಿ ಅಭಿನಂದನಾ ಭಾಷಣ ನಡೆಸಿದರು ಬಳಿಕ ಮೌಲಾನಾ ಶಾಫಿ ಸಅದಿಯವರಿಗೆ ಅಭಿನಂದನಾ ಕಾರ್ಯಕ್ರಮ ನಡೆಸಲಾಯಿತು ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಿಂದ ಎಲ್ಲಾ ಸೌಕರ್ಯಗಳನ್ನು ಒದಗಿಸುವಲ್ಲಿ ಗರಿಷ್ಠ ಪ್ರಯತ್ನವನ್ನು ನಡೆಸುವೆನೆಂದು ಹೇಳಿದರು.

ಜಾಹೀರಾತು

ಸಯ್ಯಿದ್ ಮದಕ ತಂಙಳ್, ಬೊಳ್ಮಾರ್ ಉಸ್ತಾದ್, ಮಂಚಿ ಉಸ್ತಾದ್, ಸೇರಾಜೆ ಉಸ್ತಾದ್, ಮುಹಮ್ಮದ್ ಮದನಿ ಸಾಮಣಿಗೆ, ರಝ್ಝಾಕ್ ಸಖಾಫಿ ಬೊಳ್ಳಾಯಿ, ಅಬ್ದುಲ್ಲಾ ಮುಸ್ಲಿಯಾರ್ ದುಬಾಯಿ, ಇಬ್ರಾಹಿಂ ಸಖಾಫಿ ದಾವಣಿಗೆರೆ, ಇಬ್ರಾಹಿಂ ಸಖಾಫಿ ಸೆರ್ಕಳ, ಅಕ್ಬರ್ ಅಲಿ ಮದನಿ ಆಲಂಪಾಡಿ, ಮತ್ತು ಹಲವು ಗಣ್ಯರ ಸಾರಥ್ಯದಲ್ಲಿ ಕಾರ್ಯಕ್ರಮ ನಡೆಸಲಾಯಿತು

ಉಮರಾ ನೇತಾರ ಸುಲೈಮಾನ್ ಹಾಜಿ ಸಿಂಗಾರಿ, ಇರಾ ಗ್ರಾಮ ನಿಕಟ ಪೂರ್ವ ಅಧ್ಯಕ್ಷರು ಅಬ್ದುಲ್ ರಝಾಕ್ ಕುಕ್ಕಾಜೆ, ಅಬೂಬಕ್ಕರ್ ಸೆರ್ಕಳ, ಸೇರಿದಂತೆ ಹಲವು ಸಾಮಾಜಿಕ ರಾಜಕೀಯ ಗಣ್ಯ ವ್ಯಕ್ತಿಗಳು ಪಾಲ್ಗೊಂಡಿದ್ದರು ವಾಲೆಮಂಡೋವ್ ಉಸ್ತಾದರ ಅಧ್ಯಕ್ಷೀಯ ‌ಭಾಷಣದ ನಂತರ ಸುನ್ನಿ ಫೈಝಿ ಉಸ್ತಾದರ ಕೃತಜ್ಞತೆಯೊಂದಿಗೆ ಕಾರ್ಯಕ್ರಮವನ್ನು ಸಮಾಪ್ತಿಗೊಳಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ