ವಿಧಾನಪರಿಷತ್ ಚುನಾವಣೆಗೆ ಸಕಲ ತಯಾರಿ: ಬಂಟ್ವಾಳದ 59 ಬೂತ್ ಗಳಲ್ಲಿ ಮತದಾನಕ್ಕೆ ಸಿದ್ಧತೆ, ಮತಪೆಟ್ಟಿಗೆಗಳ ಮಸ್ಟರಿಂಗ್ ಕಾರ್ಯ

ಬಂಟ್ವಾಳನ್ಯೂಸ್ ವರದಿ, www.bantwalnews.com REPORT

ಬಂಟ್ವಾಳ: ದ.ಕ.-ಉಡುಪಿ ಸ್ಥಳೀಯ ಸಂಸ್ಥೆ ಪ್ರತಿನಿಧಿಗಳ ವಿಧಾನ ಪರಿಷತ್ತಿನ 2 ಸ್ಥಾನಗಳಿಗೆ ಡಿ. 10 ರಂದು ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮೊಡಂಕಾಪು ಇನ್ಫೆಂಟ್ ಜೀಸಸ್ ಶಾಲೆಯಲ್ಲಿ ಮಸ್ಟರಿಂಗ್ ಕಾರ್ಯ ಗುರುವಾರ ನಡೆಯಿತು.ಒಟ್ಟು 7 ಕೊಠಡಿಗಳಲ್ಲಿ ಈ ಕಾರ್ಯ ನಡೆಯಿತು, ಬಳಿಕ 18 ರೂಟ್‌ಗಳಲ್ಲಿ 18 ವಾಹನಗಳ ಮೂಲಕ ಮತಪೆಟ್ಟಿಗೆಯನ್ನು ಸಾಗಿಸಲಾಯಿತು. ಮತದಾನ ಪೂರ್ಣಗೊಂಡ ಬಳಿಕ ಪೆಟ್ಟಿಗೆಗಳನ್ನು ಮತ್ತೆ ಮೊಡಂಕಾಪು ತಂದು ಬಳಿಕ ಮಂಗಳೂರಿನ ಸ್ಟ್ರಾಂಗ್ ರೂಮ್‌ಗೆ ಸಾಗಿಸಲಾಗುತ್ತದೆ.ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಮಸ್ಟರಿಂಗ್ ಕೇಂದ್ರಕ್ಕೆ ಆಗಮಿಸಿ ಸಿದ್ಧತೆ ಪರಿಶೀಲನೆ ನಡೆಸಿದರು. ಈ ಸಂದರ್ಭ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್., ತಾಪಂ ಇಒ ರಾಜಣ್ಣ, ಚುನಾವಣಾ ಶಾಖಾ ಉಪತಹಶೀಲ್ದಾರ್ ನವೀನ್ ಬೆಂಜನಪದವು, ಉಪತಹಸೀಲ್ದಾರ್ ಗಳಾದ ರಾಜೇಶ್ ನಾಯ್ಕ್, ದಿವಾಕರ ಮುಗುಳಿಯ, ಕಂದಾಯ ನಿರೀಕ್ಷಕರಾದ ಧರ್ಮ ಸಾಮ್ರಾಜ್ಯ, ಮಂಜುನಾಥ್  ಕೆ.ಎಚ್, ಕುಮಾರ್ ಟಿ.ಸಿ ಬಂಟ್ವಾಳ ತಾಲೂಕಿನ ಪೊಲೀಸ್ ಇನ್ಸ್ ಪೆಕ್ಟರ್ ಗಳಾದ ವಿವೇಕಾನಂದ, ನಾಗರಾಜ್, ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.ಬಂಟ್ವಾಳ ತಾಲೂಕಿನ 58 ಗ್ರಾ.ಪಂ.ಗಳು ಹಾಗೂ ಬಂಟ್ವಾಳ ಪುರಸಭೆ ಸೇರಿ ಒಟ್ಟು 59 ಬೂತ್‌ಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. 437 ಪುರುಷರು ಹಾಗೂ 466 ಮಹಿಳೆಯರು ಸೇರಿ ಒಟ್ಟು 903 ಮಂದಿ ಮತದಾರರಿದ್ದಾರೆ. ಈ ಚುನಾವಣೆಯಲ್ಲಿ ಶಾಸಕರು ಕೂಡ ಮತದಾನ ಮಾಡಲಿದ್ದಾರೆ.  ಪ್ರತಿ ಬೂತ್‌ಗಳಲ್ಲಿ ಓರ್ವ ಪಿಆರ್‌ಒ, ಎಪಿಆರ್ ಒ., ಮೈಕ್ರೋ ಅಬ್ಸಾರ್ವರ್, ಡಿ ಗ್ರೂಪ್, ಪೊಲೀಸ್ ಸಿಬಂದಿ, ಕ್ಯಾಮರಾ ಮ್ಯಾನ್ ಇರುತ್ತಾರೆ.

ಜಾಹೀರಾತು
ಜಾಹೀರಾತು

About the Author

Harish Mambady
ಕಳೆದ 27 ವರ್ಷಗಳಿಂದ ಪತ್ರಕರ್ತನಾಗಿ ಹಲವು ದೈನಿಕಗಳಲ್ಲಿ ಮಂಗಳೂರು, ಮಣಿಪಾಲ ಮತ್ತು ಬಂಟ್ವಾಳಗಳಲ್ಲಿ ಕೆಲಸ ಮಾಡಿರುವ ಅನುಭವ ಇರುವ ಹರೀಶ ಮಾಂಬಾಡಿ, 2016ರಲ್ಲಿ www.bantwalnews.com ಆರಂಭಿಸಿದ್ದು, ಇದರ ಸಂಪಾದಕರೂ ಆಗಿದ್ದಾರೆ. Harish Mambady - who has experience working as a Journalist in various Print and Digital Media in Dakshina Kannada, Udupi (Mangalore, Manipal, and Bantwal) for the past 27 years, He Started digital Media www.bantwalnews.com in 2016.

Be the first to comment on "ವಿಧಾನಪರಿಷತ್ ಚುನಾವಣೆಗೆ ಸಕಲ ತಯಾರಿ: ಬಂಟ್ವಾಳದ 59 ಬೂತ್ ಗಳಲ್ಲಿ ಮತದಾನಕ್ಕೆ ಸಿದ್ಧತೆ, ಮತಪೆಟ್ಟಿಗೆಗಳ ಮಸ್ಟರಿಂಗ್ ಕಾರ್ಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*