ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಲ್ಎಂಎಸ್ ಬಳಕೆ, ನಿರ್ವಹಣೆ ಕುರಿತ ಕಾರ್ಯಾಗಾರ

ಬಂಟ್ವಾಳನ್ಯೂಸ್ ವರದಿ, www.bantwalnews.com REPORT

ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಲ್ಎಂಎಸ್ ಬಳಕೆ, ನಿರ್ವಹಣೆ ಕುರಿತ ಕಾರ್ಯಾಗಾರ ನಡೆಯಿತು.

ಸರಕಾರಿ ಪ್ರಥಮ ದರ್ಜೆ ಕಾಲೇಜು, ಸಿದ್ಧಕಟ್ಟೆಯಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶದ ಆಶ್ರಯದಲ್ಲಿ “ಎಲ್ಎಂಎಸ್ ಬಳಕೆ ಹಾಗೂ ನಿರ್ವಹಣೆ” ಕುರಿತು ಕಾರ್ಯಗಾರ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಪ್ರೊ. ಸ್ಟೀವನ್ ಕ್ವಾಡ್ರೋಸ್, ವಿಶೇಷ ಅಧಿಕಾರಿಗಳು, ಕಾಲೇಜು ಶಿಕ್ಷಣ ಇಲಾಖೆ, ಜಂಟಿ ನಿರ್ದೇಶಕರ ಕಚೇರಿ ಮಾತನಾಡಿ ಎಲ್ಎಂಎಸ್ ಒಂದು ಡಿಜಿಟಲ್ ಕಲಿಕಾ ವ್ಯವಸ್ಥೆಯಾಗಿದ್ದು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಎಲ್ಎಂಎಸ್ ವ್ಯವಸ್ಥೆಯನ್ನು ಸದುಪಯೋಗಪಡಿಸಿಕೊಂಡು, ಅಲ್ಲಿರುವ ಜ್ಞಾನವನ್ನು ಬಳಸಿಕೊಂಡು ಬದುಕಿನ ಗುರಿಯನ್ನು ಸಾಧಿಸಬೇಕು ಎಂದರು. ಈ ಸಂದರ್ಭ ಅವರು, ಕಾಲೇಜಿನ ವಿವಿಧ ತರಗತಿಗಳಿಗೆ ಬೇಟಿಕೊಟ್ಟು ಅಲ್ಲಿನ ವಿದ್ಯಾರ್ಥಿಗಳಿಗೆ ಎಲ್ಎಂಎಸ್ ನ ವಿವಿಧ ಬಳಕೆಯ ಸಾಧ್ಯತೆಗಳನ್ನು ತಿಳಿಸಿದರು.

ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಿನ್ಸಿಪಾಲ್ ಸೌಮ್ಯ ಎಚ್. ಕೆ. ಎಲ್ಎಂಎಸ್ ವಿದ್ಯಾರ್ಥಿಗಳಿಗೆ ಸರಕಾರ ರೂಪಿಸಿಕೊಟ್ಟ ಉತ್ತಮ ವ್ಯವಸ್ಥೆಯಾಗಿದ್ದು, ಅದನ್ನು ನಾವೆಲ್ಲರೂ ಸದ್ಭಳಕೆ ಮಾಡಿಕೊಂಡಾಗಲೆ ಅದಕ್ಕಾಗಿ ಶ್ರಮಿಸಿದ ಪ್ರತಿಯೊಬ್ಬರಿಗೂ ಗೌರವಿಸಿದಂತೆ ಆಗುತ್ತದೆ ಎಂದರು. ಕಾಲೇಜಿನ ಬೋಧಕ-ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡ ಕಾರ್ಯಕ್ರಮದಲ್ಲಿ, ಕಾಲೇಜಿನ ಎಲ್ಎಂಎಸ್ ಸಂಚಾಲಕ ವಿನಯ್ ಎಂ. ಎಸ್. ಸ್ವಾಗತಿಸಿ, ವಿದ್ಯಾರ್ಥಿ ಕಿಶೋರ್ ವಂದಿಸಿದರು. ವಿದ್ಯಾರ್ಥಿನಿ ಚೈತ್ರ  ನಿರೂಪಿಸಿದ ಕಾರ್ಯಕ್ರಮದಲ್ಲಿ, ಅನುಷಾ ಪ್ರಾರ್ಥಿಸಿದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಲ್ಎಂಎಸ್ ಬಳಕೆ, ನಿರ್ವಹಣೆ ಕುರಿತ ಕಾರ್ಯಾಗಾರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*