ಬಂಟ್ವಾಳ

ಹೊಸವರ್ಷಾಚರಣೆ, ಪಾರ್ಟಿಗಳಿಗೆ ನಿಷೇಧ: ತಹಸೀಲ್ದಾರ್ ಗೆ ಹಿಂದು ಜನಜಾಗೃತಿ ಸಮಿತಿ ಮನವಿ

ಬಂಟ್ವಾಳನ್ಯೂಸ್ ವರದಿ, www.bantwalnews.com REPORT

ಬಂಟ್ವಾಳ: ಹೊಸವರ್ಷಾಚರಣೆ, ಪಾರ್ಟಿಗಳಿಗೆ ಡಿ.31ರಂದು ನಿಷೇಧ ಹೇರಬೇಕು ಎಂದು ಹಿಂದು ಜನಜಾಗೃತಿ ವೇದಿಕೆ ಬಂಟ್ವಾಳ  ತಹಸೀಲ್ದಾರ್ ಗೆ ಮನವಿ ಮಾಡಿದೆ. ಈ ಕುರಿತು ತಹಸೀಲ್ದಾರ್ ರಶ್ಮಿ ಎಸ್.ಆರ್. ಅವರಿಗೆ ಮನವಿಯನ್ನು ವೇದಿಕೆ ಸಲ್ಲಿಸಿದೆ.

ದೇಶದಾದ್ಯಂತ ಹೆಚ್ಚುತ್ತಿರುವ ಪಾಶ್ಚಾತ್ಯ ಕೆಟ್ಟ ರೂಢಿಗಳ ಅಂಧಾನುಕರಣೆಯಿಂದಾಗಿ ಹೊಸ ವರ್ಷದ ಹೆಸರಿನಲ್ಲಿ ಡಿಸೆಂಬರ್ 31ರ ಮಧ್ಯರಾತ್ರಿ ಧೂಮಪಾನ, ಮದ್ಯಪಾನ, ಅಮಲು ಪದಾರ್ಥಗಳ ಸೇವನೆ, ಪಾರ್ಟಿಗಳ ಆಯೋಜನೆ ಮಾಡುವುದು ಹೆಚ್ಚಾಗಿರುತ್ತದೆ, ಈ ರಾತ್ರಿ ಮದ್ಯಪಾನ ಮಾಡಿ ಅತಿವೇಗದಿಂದ ವಾಹನಗಳನ್ನು ಓಡಿಸುವುದು ಹೆಚ್ಚಾಗಿದ್ದು, ಇವರಲ್ಲಿ ಸಣ್ಣವಯಸ್ಸಿನ ಯುವಕರು, ಯುವತಿಯರು ಮತ್ತು ಮಹಿಳೆಯರು ಸಹ ಇರುತ್ತಾರೆ. ಇದಲ್ಲದೇ ಇಂತಹ ಸಮಯದಲ್ಲಿ ಅನೇಕ ಮಹಿಳೆಯರ ಲೈಂಗಿಕ ಕಿರುಕುಳ, ಅತ್ಯಾಚಾರ ಮುಂತಾದ ಘಟನೆಗಳು ನಡೆಯುತ್ತಿದೆ. ಈಗ ಕೊರೋನಾ ಮಹಾಮಾರಿಯು 3ನೇ ಅಲೆ ಬರುವ ಸಾಧ್ಯತೆ ಇದೆ. ಹೀಗಿರುವಾಗ ಡಿಸೆಂಬರ್ 31 ರಂದು ಆಚರಿಸಲಾಗುವ ಪಾರ್ಟಿಯಿಂದ ಕೊರೋನಾದ ಸೊಂಕು ಹೆಚ್ಚು ಪ್ರಮಾಣದಲ್ಲಿ ಹರಡುವ ಸಾಧ್ಯತೆ ಇದೆ. ಈ ಸಮಯದಲ್ಲಿ ಸಾರ್ವಜನಿಕರ ಆರೋಗ್ಯವನ್ನು ಅಪಾಯಕ್ಕೀಡು ಮಾಡುವುದು ಯೋಗ್ಯವಲ್ಲ. ಆದ್ದರಿಂದ ಡಿಸೆಂಬರ್ 31 ರಾತ್ರಿ ಹೊಸ ವರ್ಷಾಚರಣೆಯನ್ನು ಪೂರ್ಣವಾಗಿ ನಿಷೇಧಿಸಬೇಕು ಎಂದು ಒತ್ತಾಯಿಸಿದೆ. ಚೇತನ ವಿಟ್ಲ, ಪಾಲಕ್ಷ ಸಜೀಪ, ನಾಗೇಶ ಬಂಟ್ವಾಳ, ಯಾದೇಶ ಬೆಂಜನ ಪದವು, ಜಯಕುಮಾರ್ ಮಂಜಲ್ಪಾದೆ, ರಾಧಾಕೃಷ್ಣ ಪೆಲಟ್ಟಕಟ್ಟೆ, ಅಜಿತ್, ಕಿರಣ್, ಸಂಕೇಶ, ಸುರೇಶ ಬಿಸಿರೋಡ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.