ವಿಶೇಷ

ಡಿ.26ರಂದು ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಮಹಿಮಾ ಎಂ.ಪಣಿಕರ್ ಭರತನಾಟ್ಯ ರಂಗಪ್ರವೇಶ

ಬಂಟ್ವಾಳನ್ಯೂಸ್ ವರದಿ, www.bantwalnews.com REPORT

ಬಂಟ್ವಾಳನ್ಯೂಸ್ ವರದಿ: ಉದಯೋನ್ಮುಖ ಭರತನಾಟ್ಯ ಕಲಾವಿದೆ  ಮಹಿಮಾ ಎಂ. ಪಣಿಕರ್ ರವರ   ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮವು  ಡಿ.26 ರ ಭಾನುವಾರ ಸಂಜೆ 5.45 ರಿಂದ ಬಂಟ್ವಾಳದ ಸ್ಪರ್ಶಕಲಾಮಂದಿರದಲ್ಲಿ ನಡೆಯಲಿದೆ. 
ಡಾ.ಮನೋಜ್ ಹಾಗೂ ವಿದುಷಿ ವಿದ್ಯಾ ಮನೋಜ್  ದಂಪತಿಯ ಪುತ್ರಿಯಾಗಿರುವ ಮಹಿಮಾ, ತನ್ನ ತಾಯಿ ವಿದ್ಯಾಮನೋಜ್ ರವರಲ್ಲಿಯೇ ಭರತನಾಟ್ಯವನ್ನು ಅಭ್ಯಸಿಸಿದವರು. ಇವರ ಕಲ್ಲಡ್ಕದ ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್(ರಿ.) ಮೂಲಕ ಇನ್ನೂರಕ್ಕೂ ಅಧಿಕ ಏಕವ್ಯಕ್ತಿ ಹಾಗೂ ಸಮೂಹ ನೃತ್ಯ ದಲ್ಲಿ‌ ಮಹಿಮಾ ಭಾಗವಹಿಸಿ ತನ್ನ ಪ್ರತಿಭೆಯನ್ನು ಮೇಳೈಸಿದ್ದಾರೆ. ರಂಗಪ್ರವೇಶ ಕಾರ್ಯಕ್ರಮದಲ್ಲಿ  ‘ಶಾಂತಲಾ ನಾಟ್ಯ’ ಪುರಸ್ಕೃತ ನೃತ್ಯಗುರು ಉಳ್ಳಾಲ ಮೋಹನ್ ಕುಮಾರ್, ಪುತ್ತೂರು ಪದಡ್ಕದ ವಿಶ್ವಕಲಾನಿಕೇತನ ಕಲಾ ಮತ್ತು ಸಂಸ್ಕೃತಿ ಸಂಸ್ಥೆಯ ನೃತ್ಯಗುರು ವಿದುಷಿ ನಯನಾ ವಿ.ರೈ ಭಾಗವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.