ಬೊಂಡಾಲ ಶ್ರೀ ಮಹಾಗಣಪತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ: ನಿರಂತರವಾಗಿ ಭಕ್ತರ ಆಗಮನವಾಗಲಿ – ಸಾಧ್ವಿ ಮಾತಾನಂದಮಯಿ ಆಶಯ

ಬಂಟ್ವಾಳನ್ಯೂಸ್ ವರದಿ, www.bantwalnews.com REPORT

ಬಂಟ್ವಾಳ: ಯುವಶಕ್ತಿಗೆ ಉತ್ತಮ ಮಾರ್ಗದರ್ಶನ ನೀಡಿದರೆ ಧರ್ಮಸಂಸ್ಕೃತಿ ಉಳಿವು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಸಾಧ್ವಿ ಶ್ರೀ ಮಾತಾನಂದಮಯಿ ಹೇಳಿದರು.

ಬಂಟ್ವಾಳ ತಾಲೂಕಿನ ಬೊಂಡಾಲ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಶ್ರಿ ಮಹಾಗಣಪತಿ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮ ಹಿನ್ನೆಲೆಯಲ್ಲಿ ನಡೆದ ಧರ್ಮಸಭೆಯಲ್ಲಿ ಮಾತನಾಡಿದರು.

ಜಾಹೀರಾತು

ಆತ್ಮಶಕ್ತಿ ಜೊತೆಯಾದರೆ ಉನ್ನತಿ ಸಾಧ್ಯ ಎಂದ ಅವರು, ಊರಿಗೆ ಆತ್ಮವಾಗಿ, ಅಂತರಂಗ ವಿಕಸನಕ್ಕೆ ದೇವಸ್ಥಾನ ಅಗತ್ಯವಿದೆ. ಸಮಾಜಕ್ಕೆ ಇದು ಪ್ರಭಾವ ಬೀರುತ್ತದೆ ಎಂದರು. ಅನ್ಯಾಯ, ಅಧರ್ಮ ದೂರ ಮಾಡಲು ಧರ್ಮ, ಸಂಸ್ಕೃತಿ ನೆಲೆವೀಡಾಗಬೇಕು ಎಂದರು. ಆತ್ಮಬಲ, ಆತ್ಮವಿಶ್ವಾಸ ಅಗತ್ಯ,ಬ್ರಹ್ಮಕಲಶೋತ್ಸವ ಬಳಿಕವೂ ದೇವಾಲಯಗಳಿಗೆ ಜನರು ಆಗಾಗ ಬರುತ್ತಿದ್ದರೆ ದೇವಸ್ಥಾನ ಮತ್ತಷ್ಟು ಅಭಿವೃದ್ಧಿ ಕಾಣಲು ಸಾಧ್ಯ ಎಂದರು.

ರಾಜ್ಯ ಧಾರ್ಮಿಕ ಪರಿಷತ್ತು ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್  ಮಾತನಾಡಿ, ದೇವಸ್ಥಾನದ ಹುಂಡಿಗೆ ಹಾಕಿದ ದುಡ್ಡು ಸದ್ವಿನಿಯೋಗವಾಗುವಂತೆ ಈಗಿನ ಸರ್ಕಾರ ಮತ್ತು ಧಾರ್ಮಿಕ ಪರಿಷತ್ತು ಮಾಡುತ್ತಿದೆ. ಗೋಶಾಲೆಗಳನ್ನು ನಿರ್ಮಿಸಲು ರಾಜ್ಯಾದ್ಯಂತ ಜಾಗ ಮಂಜೂರುಗೊಳ್ಳುತ್ತಿದೆ. ನಮ್ಮೊಳಗೆ ಇರುವ ಅರಿಷಡ್ವರ್ಗಗಳನ್ನು ಹಿಡಿತದಲ್ಲಿಟ್ಡುಕೊಳ್ಳುವ ಕೆಲಸ ಆಗಬೇಕು, ಜೀರ್ಣೋದ್ಧಾರಗೊಂಡ ದೇವಸ್ಥಾನಕ್ಕೆ ಭಕ್ತರು ಸದಾ ಆಗಮಿಸುತ್ತಿರಬೇಕು ಎಂದರು.

ನರಹರಿ ಶ್ರೀ ಸದಾಶಿವ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ. ಪ್ರಶಾಂತ್ ಮಾರ್ಲ, ಉದ್ಯಮಿ ಮಾಧವ ಮಾವೆ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು, ಬೊಂಡಾಲ ವಿನೋದ್ ಶೆಟ್ಟಿ, ನಾಗೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪದ್ಮನಾಭ ಕೊಟ್ಟಾರಿ ಸ್ಚಾಗತಿಸಿದರು. ರಾಜೇಶ್ ಕೊಟ್ಟಾರಿ ಮತ್ತು ಜಿನ್ನಪ್ಪ ಏಳ್ತಿಮಾರ್ ಕಾರ್ಯಕ್ರಮ ನಿರ್ವಹಿಸಿದರು. ಸಮಿತಿಯ ಪ್ರಮುಖರಾದ ದಿನೇಶ್ ಅಮ್ಟೂರು ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬೊಂಡಾಲ ಶ್ರೀ ಮಹಾಗಣಪತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ: ನಿರಂತರವಾಗಿ ಭಕ್ತರ ಆಗಮನವಾಗಲಿ – ಸಾಧ್ವಿ ಮಾತಾನಂದಮಯಿ ಆಶಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*