ಅಂತರಂಗದಲ್ಲಿ ದೇವರು ನೆಲೆಸಿದಾಗ ಮನಃಶುದ್ಧಿ: ಗುರುಪುರ ವಜ್ರದೇಹಿ ಮಠಾಧೀಶರು

ಬಂಟ್ವಾಳನ್ಯೂಸ್ ವರದಿ, www.bantwalnews.com REPORT

ಬಂಟ್ವಾಳ: ದೇವರು ನಮ್ಮ ಅಂತರಂಗದಲ್ಲಿ ನೆಲೆಸಿದಾಗಲೇ ನಮ್ಮ ಮನಃಶುದ್ಧಿ ಸಾಧ್ಯವಿದ್ದು, ದೇವಾಲಯಗಳ ನಿರ್ಮಾಣದಿಂದ ನಿರಂತರವಾಗಿ ಸಮಾಜದ ಮನಃಶುದ್ಧಿಯ ಕಾರ್ಯ ನಡೆಯುತ್ತದೆ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು.

ಬೊಂಡಾಲ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂದ ಬ್ರಹ್ಮಕಲಶಾಭಿಷೇಕ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು. ಬಿ.ಸಿ.ರೋಡು ಶ್ರೀ ಅನ್ನಪೂರ್ಣೇಶ್ವರೀ ನಾಗದೇವರ ದೇವಸ್ಥಾನದ ಪ್ರಧಾನ ಅರ್ಚಕ ಮಾದಕಟ್ಟೆ ಈಶ್ವರ ಭಟ್, ಉದ್ಯಮಿಗಳಾದ ಜಗನ್ನಾಥ ಚೌಟ ಬದಿಗುಡ್ಡೆ, ಸಚ್ಚಿದಾನಂದ ಶೆಟ್ಟಿ ಬೊಂಡಾಲ, ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ, ಶ್ರೀ ಕ್ಷೇತ್ರ ನಿಟಿಲಾಪುರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಸುಬ್ರಹ್ಮಣ್ಯ ಭಟ್, ಕಲ್ಲಡ್ಕ ಶ್ರೀ ಉಮಾಶಿವ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ರಾಕೋಡಿ, ಪುರಸಭಾ ಸದಸ್ಯ ಜಯರಾಮ ನಾಯ್ಕ ಗುಂಡೂರು, ಕ್ಷೇತ್ರದ ಆಡಳಿತ ಮೊಕ್ತೇಸರ ಜಯರಾಮ ಹೊಳ್ಳ ನಾಗ್ತಿಮಾರು ಉಪಸ್ಥಿತರಿದ್ದರು.ಸಭೆಯಲ್ಲಿ ಕ್ಷೇತ್ರದ ಶಿಲ್ಪಿಗಳಾದ ಮಣಿ, ಕುಬೇರ, ರಾಮಚಂದ್ರ ಆಚಾರ್ಯ, ತಾಮ್ರದ ಹೊದಿಕೆಯ ಕೆಲಸ ನಿರ್ವಹಿಸಿದ ರವಿ ಶೆಟ್ಟಿ ಹಾಗೂ ಗಾಯಕಿ ಚೈತ್ರಾ ಗಾಣಿಗ ಕಲ್ಲಡ್ಕ ಅವರನ್ನು ಗೌರವಿಸಲಾಯಿತು. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆ.ಪದ್ಮನಾಭ ಕೊಟ್ಟಾರಿ ಸ್ವಾಗತಿಸಿದರು. ಸ್ವಾಗತ ಸಮಿತಿಯ ಬೊಂಡಾಲ ವಿನೋದ್‌ಕುಮಾರ್ ಶೆಟ್ಟಿ ವಂದಿಸಿದರು. ಯತಿರಾಜ್ ಪೆರಾಜೆ ಹಾಗೂ ರಾಜೇಶ್ ಕೊಟ್ಟಾರಿ ಕಾರ್ಯಕ್ರಮ ನಿರ್ವಹಿಸಿದರು.  

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಅಂತರಂಗದಲ್ಲಿ ದೇವರು ನೆಲೆಸಿದಾಗ ಮನಃಶುದ್ಧಿ: ಗುರುಪುರ ವಜ್ರದೇಹಿ ಮಠಾಧೀಶರು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*