ಸಜಿಪಮುನ್ನೂರು ಗ್ರಾಮಸ್ಥರಿಗೆ ನೀರು ಪೂರೈಕೆ ವ್ಯವಸ್ಥೆ ಕಲ್ಪಿಸಿದ ಬಳಿಕವಷ್ಟೇ ಪೈಪ್ ಲೈನ್ ಸಾಗಲು ಅವಕಾಶ, ಇಲ್ಲದಿದ್ದರೆ ತೀವ್ರ ಹೋರಾಟ – ಎಸ್.ಡಿ.ಪಿ.ಐ. ಎಚ್ಚರಿಕೆ

ಬಂಟ್ವಾಳನ್ಯೂಸ್ ವರದಿ, www.bantwalnews.com REPORT

ಬಂಟ್ವಾಳ: ನೇತ್ರಾವತಿ ನದಿಯಿಂದ ಉಳ್ಳಾಲ ಮತ್ತು ಕೋಟೆಕಾರಿಗೆ ಕುಡಿಯುವ ನೀರು ಪೂರೈಕೆ ಮಾಡುವ ಪೈಪ್ ಅಳವಡಿಕೆ ಕಾಮಗಾರಿ ಸಜಿಪಮುನ್ನೂರು ಗ್ರಾಮದಲ್ಲಿ ಆರಂಭಿಸಬೇಕಾದರೆ, ಮೊದಲು ಗ್ರಾಮಸ್ಥರ ಬೇಡಿಕೆಯನ್ನು ಈಡೇರಿಸಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ಹಾಗೂ ಕಾನೂನು ಹೋರಾಟ ನಡೆಸಲಾಗುವುದು, ಕಾಮಗಾರಿ ಆರಂಭಿಸಲು ಅವಕಾಶ ನೀಡುವುದಿಲ್ಲ‌ ಎಂದು ಎಸ್.ಡಿ.ಪಿ.ಐ. ಸಜಿಪಮುನ್ನೂರು ಗ್ರಾಮ ಸಮಿತಿ ಎಚ್ಚರಿಸಿದೆ.

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್.ಡಿ.ಪಿ.ಐ. ಗ್ರಾಮ ಸಮಿತಿ ಅಧ್ಯಕ್ಷ ಹಂಝ ನಂದಾವರ ಮತ್ತು ಮುಖಂಡ ಮಲಿಕ್ ಕೊಳಕೆ, ಉಳ್ಳಾಲ ನಗರಸಭೆ ಮತ್ತು ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಕುಡಿಯುವ ನೀರು ಪೂರೈಕೆಗೆ 198 ಕೋಟಿ ರೂಪಾಯಿ ವೆಚ್ಚದ ಕಾಮಗಾರಿ ನಡೆಯುತ್ತಿದೆ. ಇದರ ಜಾಕ್ ವೆಲ್ ಸಜೀಪಮುನ್ನೂರು ಗ್ರಾಮದ ಆಲಾಡಿ ಎಂಬಲ್ಲಿನ ನೇತ್ರಾವತಿ ತಟದಲ್ಲಿ ಇದೆ. ಈ ಯೋಜನೆಯ ಕಾಮಗಾರಿ ಆರಂಭದ ಸಮಯದಲ್ಲಿ ಈ ಯೋಜನೆಯಲ್ಲಿ ಸಜಿಪಮುನ್ನೂರು ಗ್ರಾಮಕ್ಕೂ ನೀರು ಕೊಡಬೇಕೆಂದು ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡ ಸಂದರ್ಭ, ಅಧಿಕಾರಿಗಳು, ಜನಪ್ರತಿನಿಧಿಗಳು ನೀರು ಪೂರೈಸುವ ಕುರಿತು ಭರವಸೆ ನೀಡಿದ್ದರು. ಈ ಹಿಂದೆಯೂ ಕರೋಪಾಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನ ಸಂದರ್ಭ ಸಜಿಪಮುನ್ನೂರಿಗೆ ನೀರು ಕಲ್ಪಿಸುವ ಕುರಿತು ಕೊಟ್ಟ ಆಶ್ವಾಸನೆ ಈಡೇರಿಲ್ಲ. ಆಲಾಡಿ ಜಾಕ್‌ವೆಲ್‌ನಿಂದ ಸುಭಾಷ್‌ ನಗರದವರೆಗಿನ ಪೈಪ್‌ಲೈನ್‌ ಕಾಮಗಾರಿ ಬಾಕಿ ಇದೆ. ಈ ಕಾಮಗಾರಿ ಆರಂಭಿಸಬೇಕಾದರೆ ಮುಡಿಪುವಿನಿಂದ ಸಜಿಪಮುನ್ನೂರು ಗ್ರಾಮದವರೆಗೆ ಗ್ರಾಮಕ್ಕೆ ನೀರು ಕೊಡುವ ಪೈಪ್ ಮೊದಲ ಅಳವಡಿಸಬೇಕು. ಇಲ್ಲದಿದ್ದರೆ ಸಜಿಪಮುನ್ನೂರು ಗ್ರಾಮದಲ್ಲೇ ನೀರು ಶುದ್ದೀಕರಣ ಘಟಕ ನಿರ್ಮಿಸಿ ಗ್ರಾಮಕ್ಕೆ ಕುಡಿಯುವ ನೀರು ಕೊಡಬೇಕು. ಇಲ್ಲದಿದ್ದರೆ ಗ್ರಾಮಸ್ಥರು ಸೇರಿ ತೀವ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು. ಎಸ್.ಡಿ.ಪಿ.ಐ. ಬಂಟ್ವಾಳ ಸಂಘಟನಾ ಕಾರ್ಯದರ್ಶಿ ಮಜೀದ್ ಆಲಡ್ಕ, ಬೂತ್ ಅಧ್ಯಕ್ಷ ಫಾರೂಕ್ ಆಲಾಡಿ, ಸಜಿಪಮುನ್ನೂರು ಗ್ರಾಪಂ ಸದಸ್ಯ ಸಿದ್ಧೀಕ್ ನಂದಾವರ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಜಿಪಮುನ್ನೂರು ಗ್ರಾಮಸ್ಥರಿಗೆ ನೀರು ಪೂರೈಕೆ ವ್ಯವಸ್ಥೆ ಕಲ್ಪಿಸಿದ ಬಳಿಕವಷ್ಟೇ ಪೈಪ್ ಲೈನ್ ಸಾಗಲು ಅವಕಾಶ, ಇಲ್ಲದಿದ್ದರೆ ತೀವ್ರ ಹೋರಾಟ – ಎಸ್.ಡಿ.ಪಿ.ಐ. ಎಚ್ಚರಿಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*