ಬಂಟ್ವಾಳ

ಅಲೆತ್ತೂರಿನಲ್ಲಿ ಜನವರಿ 2ರಂದು ಇಡೀ ದಿನ ‘ಒಸರ್ ದ ಕಂಡೊಡು ಕೆಸರ್ ಡ್ ಗೊಬ್ಬುಗ’

www.bantwalnews.com Report ಬಂಟ್ವಾಳನ್ಯೂಸ್ ವರದಿ ಬಿ.ಸಿ.ರೋಡಿನ ಅಲೆತ್ತೂರಿನ ‘ಕೆಸರ್ ಕಂಡ’ದಲ್ಲಿ ಅಲೆತ್ತೂರು ದಿ.ಗೋಪಾಲ ಪೂಜಾರಿ ಸ್ಮರಣಾರ್ಥ ಅವರ ಪುತ್ರ ಲೋಕೇಶ್ ಸುವರ್ಣ ಅಲೆತ್ತೂರು ಸಾರಥ್ಯದಲ್ಲಿ ಒಸರ್ ದ ಕಂಡೊಡು ಕೆಸರ್ ಡ್ ಗೊಬ್ಬುಗ ಎಂಬ ಕೆಸರುಗದ್ದೆ ಕ್ರೀಡಾಕೂಟ ನಡೆಯಲಿದೆ. ಬೆಳಗ್ಗೆ 8.30ಕ್ಕೆ ಆರಂಭಗೊಳ್ಳುವ ಕ್ರೀಡಾಕೂಟ ಸಂಜೆವರೆಗೆ ನಡೆಯಲಿದ್ದು, ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಲಿದ್ದಾರೆ. ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್ ದೀಪ ಪ್ರಜ್ವಲನೆ ಮಾಡುವರು. ಸಮಾರೋಪ ಸಂಜೆ 5ಕ್ಕೆ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಎ.ರುಕ್ಮಯ ಪೂಜಾರಿ, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಸ್ಥಾಪಕ ಡಾ. ತುಕಾರಾಮ ಪೂಜಾರಿ ಸಹಿತ ಪ್ರಮುಖರು ಭಾಗವಹಿಸುವರು. ಕ್ರೀಡಾಕೂಟದಲ್ಲಿ ಮಕ್ಕಳಿಗೆ 3 ಕಾಲಿನ ಓಟ, ಉಪ್ಪಿನಮೂಟೆ, ಲಿಂಬೆ ಚಮಚ, ನೀರು ತುಂಬಿಸುವುದು ಇದ್ದರೆ, ಮಕ್ಕಳಿಗೆ ಮತ್ತು ಪುರುಷರಿಗೆ ಅಡಿಕೆ ಹಾಳೆ ಓಟ, ಮಕ್ಕಳಿಗೆ ಮತ್ತು ಮಹಿಳೆಯರಿಗೆ ಸಂಗೀತ ಕುರ್ಚಿ, ಪುರುಷರು ಮತ್ತು ಮಹಿಳೆಯರಿಗೆ 100 ಮೀ.ಓಟದ ಸ್ಪರ್ಧೆ ಇರಲಿದೆ. ಪುರುಷರು ಮತ್ತು ಮಹಿಳೆಯರಿಗೆ ಹಗ್ಗ ಜಗ್ಗಾಟ, ರಿಲೇ ಇದ್ದರೆ, ವಿಶೇಷ ಆಕರ್ಷಣೆಯಾಗಿ ನಿಧಿ ಶೋಧ, ಒಮ್ಮುಖ ಓಟ, ಜೋಡಿ ಕಂಬಳ ಇರಲಿದೆ ಎಂದು ಲೋಕೇಶ ಸುವರ್ಣ ಅಲೆತ್ತೂರು ತಿಳಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ