www.bantwalnews.com Report ಬಂಟ್ವಾಳನ್ಯೂಸ್ ವರದಿ ಬಂಟ್ವಾಳ : ಬಿ.ಸಿ.ರೋಡು ಮುಖ್ಯ ವೃತ್ತದಿಂದ ಕುಲಾಲ ಭವನ ಮತ್ತು ದೈಪಲ, ಕಾಮಾಜೆ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ಇದನ್ನು ಅಭಿವೃದ್ಧಿಗೊಳಿಸಲು ಬಂಟ್ವಾಳ ಶಾಸಕ ರಾಜೇಶ್ ನಾಕ್ರವರಿಗೆ ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ವತಿಯಿಂದ ಮನವಿ ನೀಡಲಾಯಿತು. ಈ ಸಂದರ್ಭ ಸಂಘದ ಅಧ್ಯಕ್ಷ ನಾರಾಯಣ ಸಿ. ಪೆರ್ನೆ, ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಅಗ್ರಬೈಲು, ಕಾರ್ಯಕಾರಿ ಸಮಿತಿಯ ಸದಸ್ಯರಾದ ಸುಕುಮಾರ್ ಬಂಟ್ವಾಳ, ಜಯಂತ ಕುಲಾಲ್ ವಗ್ಗ ಮತ್ತು ಮಚ್ಚೇಂದ್ರನಾಥ ಸಾಲ್ಯಾನ್ ಈ ಸಂದರ್ಭ ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕುಲಾಲ ಭವನಕ್ಕೆ ತೆರಳುವ ರಸ್ತೆ ದುರಸ್ತಿಗೊಳಿಸುವಂತೆ ಶಾಸಕರಿಗೆ ಮನವಿ"