ವಾಮದಪದವು

ಪಾಂಗಲ್ಪಾಡಿಯಿಂದ ಮಾವಿನಕಟ್ಟೆವರೆಗೆ ಸ್ವಚ್ಛತಾ ಅಭಿಯಾನ

www.bantwalnews.com Report ಬಂಟ್ವಾಳನ್ಯೂಸ್ ವರದಿ

ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಲ್ಪಾಡಿಯಿಂದ ಮಾವಿನಕಟ್ಟೆವರೆಗೆ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ನಡೆಯಿತು. ಲಯನ್ಸ್ ಕ್ಲಬ್ ವಾಮದಪದವು ಪ್ರಕೃತಿ ವತಿಯಿಂದ ಚೆನ್ನೈತ್ತೋಡಿ ಗ್ರಾಮ ಪಂಚಾಯತು, ಬಾಲಯೇಸು ದೇವಾಲಯ ಕರಿಮಲೆ,ಭಾರತೀಯ ಕಥೋಲಿಕ್ ಯುವ ಸಂಚಲನ ವಾಮದಪದವು ಘಟಕ, ವಾಮದಪದವು ಸರಕಾರಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಆಲದಪದವು ನೂರುಲ್ ಇಸ್ಲಾಂ ಮದರಸ ಮತ್ತು ಮಸೀದಿ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಲಯನ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ಚಂದ್ರ ಆಳ್ವ ಅಭಿಯಾನ ಉದ್ಘಾಟಿಸಿದರು. ಚೆನ್ನೈತ್ತೋಡಿ ಗ್ರಾಮ ಪಂಚಾಯತು ಅಧ್ಯಕ್ಷೆ ಭಾರತಿ ರಾಜೇಂದ್ರ ಅಧ್ಯಕ್ಷತೆ ವಹಿಸಿದ್ದರು.ಪಂಚಾಯತು ಅಭಿವೃದ್ಧಿ ಅಧಿಕಾರಿ ರಾಜಶೇಖರ ರೈ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಚರ್ಚ್ ಧರ್ಮಗುರು ಲಿಯೋ ವೇಗಸ್, ಮಸೀದಿ ಧರ್ಮಗುರು ರಫೀಕ್ ಅಜಾದಿ ಶುಭ ಹಾರೈಸಿದರು. ಮಸೀದಿ ಅಧ್ಯಕ್ಷ ಹಂಝ ಎ.ಬಸ್ತಿಕೋಡಿ, ಕಥೋಲಿಕ್ ಯುವ ಸಂಚಲನ ಅಧ್ಯಕ್ಷೆ ಜ್ಯೋತ್ಸ್ನ ಮೊರಾಸ್, ಲಯನ್ಸ್ ಕ್ಲಬ್ ಕಾರ್ಯದರ್ಶಿ ಲಾದ್ರೂ ಮೆನೇಜಸ್, ಎನ್ ಎಸ್ ಎಸ್ ಯೋಜನಾಧಿಕಾರಿ ದಯಾನಂದ್ ಉಪಸ್ಥಿತರಿದ್ದರು. ಪಂಚಾಯತ್ ಸದಸ್ಯ ನವೀನ್ಚಂದ್ರ ಶೆಟ್ಟಿ ಸ್ವಾಗತಿಸಿದರು. ಪತ್ರಕರ್ತ ಗೋಪಾಲ ಅಂಚನ್ ಕಾರ್ಯಕ್ರಮ ನಿರೂಪಿಸಿದರು. ಲಯನ್ಸ್ ಸದಸ್ಯ ಯೋಗೀಶ್ ಕಲಸಡ್ಕ ವಂದಿಸಿದರು.  ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ರಸ್ತೆಯ ಇಕ್ಕೆಲ್ಲಗಳಲ್ಲಿ ಸಂಘಟನೆಗಳ ಸದಸ್ಯರು‌ ಸ್ವಚ್ಚತಾ ಕಾರ್ಯಕ್ರಮ ನಡೆಸಿದರು. ಸ್ವಚ್ಚತೆಯ ಬಗ್ಗೆ ಇದೇ ಸಂದರ್ಭ ಜಾಗೃತಿ ಮೂಡಿಸಲಾಯಿತು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.