ಫರಂಗಿಪೇಟೆ

ತುಂಬೆಯಲ್ಲಿ ದಿ. ಬಸ್ತಿ ವಾಮನ್ ಶೆಣೈ ಅವರಿಗೆ ಶ್ರದ್ಧಾಂಜಲಿ

www.bantwalnews.com Report ಬಂಟ್ವಾಳನ್ಯೂಸ್ ವರದಿ

ಕೊಂಕಣಿ ಸಾರಸ್ವತ್ ಸರ್ದಾರ್ ಬಸ್ತಿ ವಾಮನ್ ಶೆಣೈ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ತುಂಬೆ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಮಾಜಿ ಸಚಿವ.ಬಿ. ರಮಾನಾಥ ರೈನುಡಿನಮನವನ್ನು ಸಲ್ಲಿಸುತ್ತಾ ಸದಾ ಸಮಾಜಸೇವೆಯೊಂದಿಗೆ ಮಾನವೀಯ ಗುಣಗಳನ್ನು ಮೈಗೂಡಿಸಿ ಸಮಾಜದ ಒಳಿತಿಗಾಗಿ ಬದುಕಿ ಬಾಳಿದ ಶೆಣೈಸದಾ ಆದರ್ಶಪ್ರಾಯರು. ತುಂಬೆಯ ಶಿಲ್ಪಿ ದಿ. ಬಿ.ಅಹ್ಮದ್ ಹಾಜಿಯವರ ಒಡನಾಡಿಯಾಗಿದ್ದ ಶೆಣೈಯವರು ಅಪ್ಪಟ ದೇಶಪ್ರೇಮಿ ಹಾಗೂ ಜಾತ್ಯಾತೀತ ಪರಂಪರೆಯ ನೈಜ ವ್ಯಕ್ತಿತ್ವವನ್ನು ಹೊಂದಿದವರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಬಿ.ಅಬ್ದುಲ್ ಸಲಾಂ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ, ತುಂಬೆ ಪದವಿಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಕೆ.ಎನ್.ಗಂಗಾಧರ ಆಳ್ವ ನುಡಿನಮನ ಸಲ್ಲಿಸಿದರು. ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಅಬ್ಬಾಸ್ ಆಲಿ, ಮುಖ್ಯೋಪಾಧ್ಯಾಯರಾದ ಶ್ರೀನಿವಾಸ್ ಕೆದಿಲ, ತುಂಬೆ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದಲ್ ಅಜೀಜ್, ತುಂಬೆ ಆಂಗ್ಲ ಮಾಧ್ಯಮ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾದ ಬಶೀರ್ ತಂಡೇಲ್, ಉಪಾಧ್ಯಕ್ಷರಾದ ನಿಸಾರ್ ಅಹ್ಮದ್ ವಳವೂರು, ಪ್ರಕಾಶ್ ಶೆಟ್ಟಿ ಶ್ರೀ ಶೈಲ ತುಂಬೆ, ಶ್ರೀ ಪುರಂದರ ಬಲ್ಯಾಯ,  ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಜಗದೀಶ್ ರೈ, ಸಾಯಿರಾಮ್.ಜೆ.ನಾಯಕ್.ಕೆ. ಉಪಸ್ಥಿತರಿದ್ದರು. ಕಾಲೇಜಿನ ಕಚೇರಿ ಅಧೀಕ್ಷಕ ಬಿ ಅಬ್ದುಲ್ ಕಬೀರ್ ಕಾರ್ಯಕ್ರಮ ನಿರೂಪಿಸಿದರು. ಅಶೋಕ್ ಕಾರ್ಯಕ್ರಮದಲ್ಲಿ ಸಹಕರಿಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.