ಬಂಟ್ವಾಳ

ಸಜಿಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

www.bantwalnews.com Report ಬಂಟ್ವಾಳನ್ಯೂಸ್ ವರದಿ

ಬಂಟ್ವಾಳ: ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.9ರಿಂದ 14ರವರೆಗೆ ನಡೆಯಲಿರುವ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಭಾನುವಾರ ನಡೆಯಿತು. ವ್ಯವಸ್ಥಾಪನಾ ಸಮಿತಿಯ ಹಿರಿಯ ಸದಸ್ಯ ಬಾಬು ಪೂಜಾರಿ ಬಿಡುಗಡೆಗೊಳಿಸಿದರು. ಬಳಿಕ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು.

ಸಜಿಪಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಅವರು ದೇವತಾ ಸನ್ನಿಧಿಯಲ್ಲಿ ಪ್ರಾರ್ಥಿಸಿ, ಕಾರ್ಯಕ್ರಮವು ನಿರ್ವಿಘ್ನವಾಗಿ ನೆರವೇರಲಿ ಎಂದು ಶುಭ ಹಾರೈಸಿದರು.

ಜಾಹೀರಾತು

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರವೀಂದ್ರನಾಥ ಎಂ. ಭಂಡಾರಿ ಪುಣ್ಕೆಮಜಲು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ರಾಧಾಕೃಷ್ಣ ಆಳ್ವ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಆರಾಧನಾ ಸಮಿತಿ ಅಧ್ಯಕ್ಷ ಯಶವಂತ ದೇರಾಜೆ, ಅರ್ಚಕ ಗಣಪತಿ ಎಂ. ಭಟ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರವೀಣ್ ಭಂಡಾರಿ, ಹರೀಶ್ ಬಂಗೇರ, ಪುರುಷೋತ್ತಮ್, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ ಸುನೀತಾ ಚಂದ್ರಕುಮಾರ್ ಶೆಟ್ಟಿ, ಉಪಾಧ್ಯಕ್ಷ ಸುಧಾಕರ ಕೆ.ಟಿ, ಕಾರ್ಯದರ್ಶಿ ಸುರೇಶ್ ಬಂಗೇರ, ಜತೆ ಕಾರ್ಯದರ್ಶಿ ನಿತಿನ್ ಅರಸ, ಕೋಶಾಧಿಕಾರಿ ಜಿ.ರಾಮಕೃಷ್ಣ ಭಟ್, ಸದಸ್ಯರಾದ ಯತೀಶ್ ಶೆಟ್ಟಿ ಮಾಡಂತಾಡಿ, ಕಿಶನ್ ಪ್ರಸಾದ್ ಶೇಣವ, ರಾಮ ಪೂಜಾರಿ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಪದ್ಮನಾಭ ಭಟ್ ಮಿತ್ತೋಟ, ಗೌರವ ಸಲಹೆಗಾರರಾದ ಶಿವರಾಮ ಭಂಡಾರಿ ಬಿಜಂತಾಡಿಗುತ್ತು, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಆಳ್ವ, ಉಪಾಧ್ಯಕ್ಷರಾದ ಅಶೋಕ್ ಪಕ್ಕಳ ವಾಮದಪದವು, ಭಕ್ತಕುಮಾರ್ ಶೆಟ್ಟಿ ದೋಟ, ಸ್ಮರಣ ಸಂಚಿಕೆ ಸಮಿತಿ ಸಹಸಂಪಾದಕಿ ರಮಾ ಎಸ್. ಭಂಡಾರಿ ಸಹಿತ ವಿವಿಧ ಸಮಿತಿಗಳ ಪ್ರಮುಖರು, ಪದಾಧಿಕಾರಿಗಳ ಸಹಿತ ಕಾರ್ಯಕರ್ತರು ಈ ಸಂದರ್ಭ ಉಪಸ್ಥಿತರಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.