ಬಂಟ್ವಾಳ

ಹಿಂಜಾವೇಯಿಂದ 14ರಿಂದ ಮನೆಮನೆ ಸಂಪರ್ಕ ಜನಜಾಗರಣ ಅಭಿಯಾನ

www.bantwalnews.com Report ಬಂಟ್ವಾಳನ್ಯೂಸ್ ವರದಿ

ಹಿಂದು ಜಾಗರಣಾ ವೇದಿಕೆಯಿಂದ ಜ.14ರಿಂದ ಮನೆ ಮನೆ ಸಂಪರ್ಕ ಜನಜಾಗರಣಾ ಅಭಿಯಾನ ನಡೆಯಲಿದೆ. ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಹಿಂಜಾವೇ ದಕ್ಷಿಣ ಪ್ರಾಂತ ಪ್ರಮುಖ ರಾಧಾಕೃಷ್ಣ ಅಡ್ಯಂತಾಯ ಈ ಕುರಿತು ಮಾಹಿತಿ ನೀಡಿ, ಹಿಂಜಾವೇ ಬಂಟ್ವಾಳ ತಾಲೂಕು, ಶ್ರೀ ಕಾರಿಂಜೇಶ್ವರ ಕ್ಷೇತ್ರ ರಕ್ಷಣಾ ಸಮಿತಿ ವತಿಯಿಂದ ಯತಿಗಳ ಮಾರ್ಗದರ್ಶನದೊಂದಿಗೆ ಹೋರಾಟದ ಮೂರನೇ ಘಟ್ಟವಾಗಿ ಮನೆಮನೆ ಸಂಪರ್ಕ ಅಭಿಯಾನ ನಡೆಸಲಾಗುತ್ತದೆ. ಕಾರಿಂಜದಲ್ಲಿ ರುದ್ರಗಿರಿಯ ರಣಕಹಳೆ ಎಂಬ ಅಭಿಯಾನವನ್ನು ಮೊದಲ ಹಂತದಲ್ಲಿ ಕೈಗೊಂಡಿದ್ದೆವು, ಬಳಿಕ ಭಕ್ತರ ನಡಿಗೆ ಜಿಲ್ಲಾಡಳಿತ ಕಡೆಗೆ ಕೈಗೊಳ್ಳಲಾಗಿತ್ತು. ಸರ್ಕಾರ, ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳಿಗೆ ಕಾರಿಂಜೇಶ್ವರ ಕ್ಷೇತ್ರದ 10 ಕಿ.ಮೀ. ವ್ಯಾಪ್ತಿಯನ್ನು ಧಾರ್ಮಿಕ ಸೂಕ್ಷ್ಮ ವಲಯ ಎಂದು ಘೋಷಿಸಿ, ಅಲ್ಲಿ ಗಣಿಗಾರಿಕೆಯನ್ನು ಸಂಪೂರ್ಣ ನಿಷೇಧಿಸಬೇಕು, ಅಲ್ಲಿನ ಪಾವಿತ್ರ್ಯತೆ ಉಳಿಸಬೇಕು ಎಂಬ ಹಿನ್ನೆಲೆಯಲ್ಲಿ ಅಭಿಯಾನ ಕೈಗೊಳ್ಳಲಾಗಿದೆ. ಒಂದೆಡೆ ಕಾನೂನು ರೀತ್ಯಾ ಹೋರಾಟವನ್ನೂ ನಡೆಸಲಾಗುತ್ತಿದೆ.  ಇದು ಯಾರದ್ದೇ ವಿರುದ್ಧವಲ್ಲ, ಹಿಂದುಗಳ ಪವಿತ್ರ ಕ್ಷೇತ್ರವಾದ ಕಾರಿಂಜವನ್ನು ಉಳಿಸಲು ಈ ಹೋರಾಟ ನಡೆಸಲಾಗುತ್ತಿದ್ದು, ಬೇಡಿಕೆ ಈಡೇರದೇ ಇದ್ದಲ್ಲಿ ಆಮರಣಾಂತ ಉಪವಾಸ ಕೈಗೊಳ್ಳಲೂ ಸಿದ್ಧ, ಗಣಿಗಾರಿಕೆ ನಿಲ್ಲಿಸುವ ನಮ್ಮ ಉದ್ದೇಶ ಅಚಲವಾಗಿದೆ ಎಂದರು.ಜನವರಿ 14ರಿಂದ ಆರಂಭಗೊಂಡು 21ರವರೆಗೆ ಇಡೀ ಬಂಟ್ವಾಳ ತಾಲೂಕಿನಲ್ಲಿ ಹಿಂದುಗಳ ಮನೆಗಳಿಗೆ ಅಭಿಯಾನ ತೆರಳಲಾಗುವುದು ಎಂದವರು ಹೇಳಿದರು. ವಿಭಾಗ ಸಂಪರ್ಕ ಪ್ರಮುಖ್ ರತ್ನಾಕರ ಶೆಟ್ಟಿ ಕಲ್ಲಡ್ಕ, ಹಿಂಜಾವೇ ಪುತ್ತೂರು ಜಿಲ್ಲಾಧ್ಯಕ್ಷ ಜಗದೀಶ ನೆತ್ತರಕೆರೆ, ಪುತ್ತೂರು ಜಿಲ್ಲಾ ಕಾರ್ಯದರ್ಶಿ ನರಸಿಂಹ ಮಾಣಿ, ಬಂಟ್ವಾಳ ತಾಲೂಕು ಕಾರ್ಯದರ್ಶಿ ಯೋಗೀಶ್ ಕುಮ್ಡೇಲು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ