ಕೌಶಲ್ಯಾಭಿವೃದ್ಧಿ-ಉದ್ಯಮಶೀಲತೆ-ಜೀವನೋಪಾಯ ಇಲಾಖೆ , ಜಿಲ್ಲಾಕೌಶಲ್ಯಾಭಿವೃದ್ಧಿ ಇಲಾಖೆ ಹಾಗೂ ಬಂಟ್ವಾಳ ಪುರಸಭೆ ಸಹಯೋಗದಲ್ಲಿ ದೀನದಯಾಳ್ ಅಂತ್ಯೋದಯಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಬಂಟ್ವಾಳ ಪುರಸಭಾ ವ್ಯಾಪ್ತಿಯ ಸ್ವ-ಸಹಾಯ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ಹಾಗೂ ಪ್ರದೇಶ ಮಟ್ಟದ ಒಕ್ಕೂಟದ ಸದಸ್ಯರಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರವನ್ನು ಪುರಸಭಾ ಸಭಾಂಗಣದಲ್ಲಿ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಉದ್ಘಾಟಿಸಿದರು. ಉಪಾಧ್ಯಕ್ಷೆ ಜೆಸಿಂತಾ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು.ಸದಸ್ಯೆ ದೇವಕಿ, ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಮಿಷನ್ ಮ್ಯಾನೇಜರ್ ಐರಿನ್ರೆಬೆಲ್ಲೋ, ಮೂಡಬಿದ್ರಿ ಪುರಸಬೆಯ ಸಮುದಾಯ ಸಂಘಟಕರಾದ ಮುರಳೀಧರ್, ಆರ್ಥಿಕ ಸಾಕ್ಷರತಾ ಕೇಂದ್ರದ ಅನುಷಾ, ಸಹಕಾರಿ ಒಕ್ಕೂಟದ ಅಧ್ಯಕ್ಷೆ ವಸಂತಿ ಗಂಗಾಧರ್ ಉಪಸ್ಥಿತರಿದ್ದರು. ಜಯಲಕ್ಷ್ಮಿ ವಂದಿಸಿದರು. ಸಮುದಾಯ ಸಂಘಟನಾ ಅಧಿಕಾರಿ ಉಮಾವತಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ಬಂಟ್ವಾಳ: ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ"