ಬಂಟ್ವಾಳ

ಎನ್ನೆಸ್ಸೆಸ್ ಕಾರ್ಯಕ್ರಮಕ್ಕೆ ಅಮ್ಟಾಡಿ ಗ್ರಾಪಂನಲ್ಲಿ ಚಾಲನೆ

www.bantwalnews.com Report ಬಂಟ್ವಾಳನ್ಯೂಸ್ ವರದಿ

ಬಂಟ್ವಾಳ: ಎನ್ನೆಸ್ಸೆಸ್ ಕಾರ್ಯಕ್ರಮಕ್ಕೆ ಆನ್ಲೈನ್ ಮೂಲಕ ಚಾಲನೆ ನೀಡಲಾಗಿದ್ದು, ಅಮ್ಟಾಡಿ ಗ್ರಾಪಂನಲ್ಲಿ ಕಾಮಾಜೆಯ ಸರ್ಕಾರಿ ಕಾಲೇಜಿನ ಎನ್ನೆಸ್ಸೆಸ್ ಘಟಕದ ಶಿಕ್ಷಕರು ಮತ್ತು ಸಿಬ್ಬಂದಿ ಭಾಗವಹಿಸಿದ್ದರು. ರಾಜ್ಯ ಸರ್ಕಾರದ ಅಮೃತ ಅಭಿವೃದ್ಧಿ ಯೋಜನೆಯಡಿ ಅಮ್ಟಾಡಿ ಗ್ರಾಮ ಪಂಚಾಯತ್ ರಾಷ್ಟ್ರೀಯ ಯೋಜನಾ ಘಟಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳದ  ದತ್ತು ಗ್ರಾಮ ವ್ಯಾಪ್ತಿಗೆ ಬರುತ್ತದೆ. ಎನ್ನೆಸ್ಸೆಸ್ ಘಟಕದ ವಾರ್ಷಿಕ  ವಿಶೇಷ ಶಿಬಿರ ಈ ಪಂಚಾಯತ್ ವ್ಯಾಪ್ತಿಯಲ್ಲಿರುತ್ತದೆ  ರಾಜ್ಯದಾದ್ಯಂತ  ಒಟ್ಟು 750 ಗ್ರಾಮಗಳನ್ನು ಈ ಕಾರ್ಯಕ್ರಮದಡಿ ಗುರುತಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ಆನ್ಲೈನ್ ಮೂಲಕ  ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಸ್ಥಳೀಯ ಕಾರ್ಯಕ್ರಮದಲ್ಲಿ ಮಂಗಳೂರು  ವಿಶ್ವವಿಧ್ಯಾನಿಲಯದ ಎನ್ನೆಸ್ಸೆಸ್  ಸಂಯೋಜನಾಧಿಕಾರಿ  ಡಾ.ನಾಗರತ್ನ  ಕೆ. ಎ. ,ಸರಕಾರಿ  ಪ್ರಥಮ ದರ್ಜೆ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಧಿಕಾರಿ ಹೈದರಾಲಿ ಪಂಚಾಯತು ಉಪಾಧ್ಯಕ್ಷರಾದ ಸುನೀಲ್ ಕೆ., ಪಿಡಿಒ  ರವಿ ಬಿ,  ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ,  ಸದಸ್ಯರಾದ ಬಾರತಿ ಚೌಟ, ಫೆಲಿಕ್ಸ್ ಡಿಸೋಜಾ, ಪಂಚಾಯತ್ ಸಿಬ್ಬಂದಿ, ಕಾಮಾಜೆ ಕಾಲೇಜಿನ ವಿಧ್ಯಾರ್ಥಿಗಳು ಭಾಗವಹಿಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.