www.bantwalnews.com Report ಬಂಟ್ವಾಳನ್ಯೂಸ್ ವರದಿ
ಬಂಟ್ವಾಳ: ಹೋಟೆಲ್ ರಂಗೋಲಿ ವಠಾರದಲ್ಲಿ ಯಕ್ಷಮಿತ್ರರು ಕೈಕಂಬ ಬಿ.ಸಿ.ರೋಡ್ ಆಶ್ರಯದಲ್ಲಿ 13ನೇ ವರ್ಷದ ಯಕ್ಷಗಾನ ಕಾರ್ಯಕ್ರಮ ನಡೆಯಲಿದ್ದು, ಹನುಮಗಿರಿ ಮೇಳದವರಿಂದ ಶುಕ್ರನಂದನೆ ಎಂಬ ಪ್ರಸಂಗ ಪ್ರದರ್ಶನಗೊಳ್ಳಿದೆ. ಜ.21ರಂದು ಸಂಜೆ 5ರಿಂದ ರಾತ್ರಿ 10ರವರೆಗೆ ಯಕ್ಷಗಾನ ನಡೆಯಲಿದ್ದು, ಈ ಸಂದರ್ಭ ಸನ್ಮಾನ ಕಾರ್ಯಕ್ರಮವೂ ನೆರವೇರಲಿದೆ. ಕಲಾವಿದ ಸದಾಶಿವ ಕುಲಾಲ್ ಅವರನ್ನು ಸನ್ಮಾನಿಸಲಾಗುವುದು. ಎಲ್ಲೈಸಿ ಅಭಿವೃದ್ಧಿ ಅಧಿಕಾರಿ ಮಧ್ವರಾಜ್ ಕಲ್ಮಾಡಿ ಅವರು ಸನ್ಮಾನ ಕಾರ್ಯ ನೆರವೇರಿಸುವರು. ಅತಿಥಿಗಳಾಗಿ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ ಭಾಗವಹಿಸುವರು ಎಂದು ಯಕ್ಷಮಿತ್ರರು ಕೈಕಂಬ ಪ್ರಕಟಣೆ ತಿಳಿಸಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…