ಕಲ್ಲಡ್ಕ

ಮಾಣಿ ಬಾನೊಟ್ಟು ಶ್ರೀ ಉಮಾಮಹೇಶ್ವರ ದೇವಸ್ಥಾನ ಜೀರ್ಣೋದ್ಧಾರ: ಸಮಾಲೋಚನಾ ಸಭೆ

www.bantwalnews.com Report ಬಂಟ್ವಾಳನ್ಯೂಸ್ ವರದಿ

ಬಂಟ್ವಾಳ: ಮಾಣಿ ಬಾನೊಟ್ಟು ಶ್ರೀ ಉಮಾಮಹೇಶ್ವರ ದೇವಾಲಯದ ಜೀರ್ಣೋದ್ಧಾರ ಕುರಿತ ಸಮಾಲೋಚನಾ ಸಭೆ ಭಾನುವಾರ ಮಾಣಿ ಉಳ್ಳಾಲ್ತಿ ದೈವಸ್ಥಾನದ ಅನ್ನಪೂರ್ಣಾ ಹಾಲ್ ನಲ್ಲಿ ನಡೆಯಿತು.

ಈ ಸಂದರ್ಭ ಪ್ರಮುಖರಾದ ಮಾಣಿಗುತ್ತು ಸಚಿನ್ ರೈ, ನೂಜಿಬೈಲು ರವಿ ಶರ್ಮ, ಮಜಿ ತಿರುಮಲ ಕುಮಾರ್, ಹರೀಶ್ ಕುಮಾರ್ ಶೆಟ್ಟಿ ಸಾಗು ಹೊಸಮನೆ, ಪಳ್ಳತ್ತಡ್ಕ ಶಂಕರನಾರಾಯಣ ಭಟ್, ರಮೇಶ್ ಕೈಂತಜೆ, ಪುಷ್ಪ ರಾಜ ಚೌಟ, ಗಣೇಶ ರೈ ಸಾಗು, ಬುಡೋಳಿ ಅಪ್ರಾಯ ಪೈ, ಮೋಹನ್ ಪೈ ಮಾಣಿ, ಗೋಪಾಲ ಪೈ ಮಾಣಿ, ಆನಂದ ಕುಲಾಲ್ ಬಾನೊಟ್ಟು, ಗೋಪಾಲ ಮೂಲ್ಯ ಶಂಭುಗ ,ಈಶ್ವರ ಭಟ್ ಲಕ್ಕಪ್ಪಕೋಡಿ, ದಿನಕರ ನಾಯಕ್ ನೇರಳಕಟ್ಟೆ, ವಾಸಪ್ಪ ಮಂಟಮೆ, ಲೋಕೇಶ್ ಪಳ್ಳತ್ತಿಲ ಸೇರಿದಂತೆ ಒಟ್ಟು 60 ಮಂದಿ ಉಪಸ್ಥಿತರಿದ್ದರು. ದೇವಸ್ಥಾನದ ಜೀರ್ಣೋದ್ಧಾರ ಕುರಿತು ಚರ್ಚೆ ನಡೆದವು. ಈ ಕುರಿತು ಪ್ರಶ್ನಾ ಚಿಂತನೆ ನಡೆಸಬೇಕು ಎಂಬ ಅನಿಸಿಕೆ ವ್ಯಕ್ತವಾಯಿತು. ಸಮಿತಿ  ರಚನೆ ಸಹಿತ ಮುಂದಿನ ಕಾರ್ಯಯೋಜನೆಗಳ ಕುರಿತು ಮುಂದಿನ ದಿನಗಳಲ್ಲಿ ಸಮಾಲೋಚನೆ ಸಭೆಯಲ್ಲಿ  ತೀರ್ಮಾನ ತೆಗೆದುಕೊಳ್ಳುವ ಬಗ್ಗೆ ನಿರ್ಣಯಿಸಲಾಯಿತು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ