ಬಂಟ್ವಾಳ

ಕಟ್ಟಾ ಅಭಿಮಾನಿ ದಿನೇಶ್ ಪೂಜಾರಿ ಹೋಟೆಲ್ ಗೆ ಭೇಟಿ ನೀಡಿದ ಯುಟಿಕೆ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳ: ಕರ್ನಾಟಕ ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಅವರು ಮಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುವ ವೇಳೆ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು  ಅಭಿಯಾನಿ ದಿನೇಶ್ ಪೂಜಾರಿ  ಹೋಟೆಲ್‌ಗೆ ತೆರಳಿ ಗೌರವ ಸ್ವೀಕರಿಸಿದರು.

ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷರಾಗಿರುವ ದಿನೇಶ್ ಪೂಜಾರಿ ಅವರು ಖಾದರ್ ಅವರ ಅಪ್ಪಟ ಅಭಿಯಾನಿಯಾಗಿದ್ದು, ಅವರು ಶಾಸಕರಾದ ಪ್ರಾರಂಭದ ವರ್ಷಗಳಲ್ಲಿ ದಿನೇಶ್ ಅವರು ಶಾಸಕರ ಬೆಂಗಳೂರಿನ ನಿವಾಸದಲ್ಲಿ ಅಡುಗೆಯವರಾಗಿದ್ದರು. ಜಕ್ರಿಬೆಟ್ಟಿನಲ್ಲಿ ಶ್ರೀ ದುರ್ಗಾ ಎಂಬ ಹೋಟೇಲ್ ನಡೆಸುತ್ತಿರುವ ದಿನೇಶ್ ಪೂಜಾರಿ ಅವರು ತನ್ನ ಹೋಟೇಲ್‌ನಲ್ಲಿ ಖಾದರ್ ಅವರ ಬೃಹತ್ ಪೋಟೋವನ್ನಿಟ್ಟಿದ್ದಾರೆ. ಹೀಗಾಗಿ ದಿನೇಶ್ ಅವರ ಮೇಲೆಯೂ ಖಾದರ್ ಅವರಿಗೆ ವಿಶೇಷ ಅಭಿಮಾನವಿದ್ದು, ಫೆ. 2ರಂದು ಧರ್ಮಸ್ಥಳಕ್ಕೆ ತೆರಳುವ ವೇಳೆ ಜಕ್ರಿಬೆಟ್ಟಿನಲ್ಲಿ ಅವರ ಹೋಟೇಲ್‌ಗೆ ತೆರಳಿ ಗೌರವ ಸ್ವೀಕರಿಸಿದರು. ಈ ವೇಳೆ ಮಂಗಳೂರು ತಾ.ಪಂ.ಮಾಜಿ ಅಧ್ಯಕ್ಷ ಮೊಹಮ್ಮದ್ ಮೋನು, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಮೊದಲಾದವರು ಯು.ಟಿ.ಖಾದರ್ ಅವರ ಜತೆಗಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ