ಗುಣಮಟ್ಟದ ಶಿಕ್ಷಣ ನೀಡುವ ಶಾಲೆಗಳ ಅಭಿವೃದ್ಧಿಗೆ ಬದ್ಧ: ಪ್ರತಾಪ್ ಸಿಂಹ ನಾಯಕ್

www.bantwalnews.com Report ಬಂಟ್ವಾಳನ್ಯೂಸ್ ವರದಿ

ಬಂಟ್ವಾಳ:  ಗುಣಮಟ್ಟದ ಶಿಕ್ಷಣ ನೀಡುವ ಶಾಲೆಗಳ ಅಭಿವೃದ್ಧಿ ನನ್ನ ಮೊದಲ ಆದ್ಯತೆ ಎಂದು ವಿಧಾನ‌ಪರಿಷತ್ ಸದಸ್ಯ ಪ್ರತಾಪ ಸಿಂಹ‌ ನಾಯಕ್ ಹೇಳಿದ್ದಾರೆ.

ಕಲ್ಲಡ್ಕ ಸರ್ಕಾರಿ  ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ‌ ಅವರು, ಶಾಲೆಯಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿ, ವಿದ್ಯಾರ್ಥಿಗಳ ಜೊತೆ ಸಮಾಲೋಚನೆ ನಡೆಸಿದರು. ತನ್ನ ಅನುದಾನದ .ಶೇ. 60 ರಷ್ಟನ್ನು ಶಾಲೆಗಳಿಗೆ ನೀಡಿದ್ದು, ಕಲ್ಲಡ್ಕ  ಶಾಲೆಯ ಅಭಿವೃದ್ಧಿಗೆ ಶಕ್ತಿ ಮೀರಿ ನೆರವು ನೀಡುವುದಾಗಿ ತಿಳಿಸಿದರು. ಮಾಜಿ ‌ಶಾಸಕ ಎ. ರುಕ್ಮಯ ಪೂಜಾರಿ ಮಾತನಾಡಿ, ಕಲ್ಲಡ್ಕ ಶಾಲೆಯ ಅಭಿವೃದ್ಧಿಗೆ ಪೂರಕವಾಗಿ ಹಲವು ಯೋಜನೆಗಳನ್ನು ರೂಪಿಸಿದ್ದು, ಇದರ ಸಹಕಾರಕ್ಕೆ ಜನಪ್ರತಿನಿಧಿಗಳ  ಸಹಕಾರ ಅಗತ್ಯ ಎಂದರು. ಇದೇ ವೇಳೆ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ‌ ನಾಯಕ್ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಹಿರಿಯರ ಪ್ರಕೋಷ್ಠದ  ಜಿಲ್ಲಾ ನಾಯಕರು ವಿಧಾನಪರಿಷತ್ ಸದಸ್ಯರ ಜೊತೆಗಿದ್ದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಧುಸೂದನ್ ಐತಾಳ್,  ಮಾಜಿ ಶಾಸಕರಾದ  ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ಮೋಹನ ದಾಸ್ ಕೊಟ್ಟಾರಿ, ನಾಗೇಶ್ ಕಲ್ಲಡ್ಕ, ಅಬ್ದುಲ್ ಸಲೀಂ , ಅಬೂಬಕರ್ ಮುರಬೈಲು ಎಸ್ ಡಿಎಂ ಸಿ ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯರು ಈ ಸಂದರ್ಭ ಉಪಸ್ಥಿತರಿದ್ದರು. ಮುಖ್ಯಶಿಕ್ಷಕ ಅಬೂಬಕರ್ ಅಶ್ರಫ್ ಸ್ವಾಗತಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯತೀನ್‌ ಕಲ್ಲಡ್ಕ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಗುಣಮಟ್ಟದ ಶಿಕ್ಷಣ ನೀಡುವ ಶಾಲೆಗಳ ಅಭಿವೃದ್ಧಿಗೆ ಬದ್ಧ: ಪ್ರತಾಪ್ ಸಿಂಹ ನಾಯಕ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*