ಬಂಟ್ವಾಳ : ಕ.ಸಾ.ಪ ನೂತನ ಪದಾಧಿಕಾರಿಗಳ ಸಭೆ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

 ಬಂಟ್ವಾಳ:ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕಿನ ನೂತನ ಪದಾಧಿಕಾರಿಗಳ ಸಮಾಲೋಚನಾ ಸಭೆ ಬಿ.ಸಿ.ರೋಡ್ ಕನ್ನಡ ಭವನದಲ್ಲಿ ಶನಿವಾರ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಕಸಾಪ ನೂತನ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಮಾತನಾಡಿ ಸಾಹಿತ್ಯವನ್ನು ಜನಸಾಮಾನ್ಯರ ಬಳಿಗೆ ಒಯ್ಯುವ ಆಲೋಚನೆ ಮತ್ತು ಯೋಜನೆಗಳಿವೆ. ಇದಕ್ಕೆ ಕನ್ನಡ ಸಾಹಿತಿಗಳ, ಕನ್ನಡಾಭಿಮಾನಿಗಳ, ಪರಿಷತ್ ನ  ಪದಾಧಿಕಾರಿಗಳ, ಮಾರ್ಗದರ್ಶಕರ ಸರ್ವರ ಸಹಕಾರ ಅತೀ ಅಗತ್ಯವಾಗಿದೆ ಎಂದರು.

ಜಾಹೀರಾತು

 ಇದೇ ವೇಳೆ ಪರಿಷತ್ತಿನ ಪದಾಧಿಕಾರಿಗಳ ಹಾಗೂ ಮಾರ್ಗದರ್ಶಿ ಸಮಿತಿ ಸದಸ್ಯರು ಗಳ ಪಟ್ಟಿಯನ್ನು ಪ್ರಕಟಿಸಲಾಯಿತು. ಕಸಾಪ ಜಿಲ್ಲಾ ಸಮಿತಿ ಸದಸ್ಯ ಪೂವಪ್ಪ ನೇರಳಕಟ್ಟೆ ಉಪಸ್ಥಿತರಿದ್ದರು. ಗೌರವ ಕಾರ್ಯದರ್ಶಿಗಳಾಗಿ ವಿ.ಸುಬ್ರಹ್ಮಣ್ಯ ಭಟ್ ಸ್ವಾಗತಿಸಿ, ರಮಾನಂದ ನೂಜಿಪ್ಪಾಡಿ ವಂದಿಸಿದರು.

ತಾಲೂಕು ಕಸಾಪದ ಅದ್ಯಕ್ಷರಾಗಿ ವಿಶ್ವನಾಥ ಬಂಟ್ವಾಳ, ನಿಕಟ ಪೂರ್ವ ಅಧ್ಯಕ್ಷರು ಕೆ. ಮೋಹನ್ ರಾವ್, ಗೌರವ ಕಾರ್ಯದರ್ಶಿಗಳಾಗಿ ವಿ.ಸುಬ್ರಹ್ಮಣ್ಯ ಭಟ್,  ರಮಾನಂದ ನೂಜಿಪ್ಪಾಡಿ, ಗೌರವ ಕೋಶಾಧ್ಯಕ್ಷರಾಗಿ ಅಬ್ದುಲ್ ರಹಿಮಾನ್ ಡಿ.ಬಿ. ಪದನಿಮಿತ್ತ ಸದಸ್ಯರಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಬಂಟ್ವಾಳ, ಸಂಘ ಸಂಸ್ಥೆಗಳ ಪ್ರತಿನಿಧಿಯಾಗಿ ಅಬೂಬಕ್ಕರ್ ಅಮ್ಮುಂಜೆ, ಮಹಿಳಾ ಪ್ರತಿನಿಧಿಗಳಾಗಿ ರಜನಿ ಚಿಕ್ಕಯ್ಯ ಮಠ, ಗೀತಾ ಕೋಂಕೋಡಿ,  ಸದಸ್ಯರುಗಳಾಗಿ ಉಮ್ಮರ್ ಮಂಚಿ, ಸುಭಾಶ್ಚಂದ್ರ ಜೈನ್, ಶಿವಪ್ಪ ಪೂಜಾರಿ, ಚೇತನ್ ಮುಂಡಾಜೆ, ಎಂ.ಡಿ.ಮಂಚಿ, ಸೋನಿತಾ ಕೆ.ನೇರಳಕಟ್ಟೆ, ಝಫರಿನ್ ಡೊಮೆನಿಕ್ ರೋಡ್ರಿಗಸ್, ಅನೀಶ್ ಬಾಳಿಕೆ

ಹೋಬಳಿ ಸಂಚಾಲಕರಾಗಿ   ಗಣೇಶ ಪ್ರಸಾದ ಪಾಂಡೇಲು, ಎ.ಗೋಪಾಲ ಅಂಚನ್ ಆಲದಪದವು, ಪಿ.ಮಹಮ್ಮದ್ ಪಾಣೆಮಂಗಳೂರು ಅವರನ್ನು  ಆಯ್ಕೆ ಮಾಡಲಾಯಿತು. ಮಾರ್ಗದರ್ಶಕ ಮಂಡಳಿಯ ಗೌರವ ನಿರ್ದೇಶಕರುಗಳಾಗಿ ಎ.ಸಿ.ಭಂಡಾರಿ, ಆಶೋಕ್ ಶೆಟ್ಟಿ ಸರಪಾಡಿ, ಹರೀಶ್ ಮಾಂಬಾಡಿ, ಉದಯಶಂಕರ್ ನೀರ್ಪಾಜೆ, ಸಂಕಪ್ಪ ಶೆಟ್ಟಿ ಬಡಗಬೆಳ್ಳೂರು, ಸುದರ್ಶನ್ ಪಡಿಯಾರ್ ವಿಟ್ಲ, ಶಿವಶಂಕರ್ ಎನ್. ಗೌರವ ಸಲಹೆಗಾರರಾಗಿ ಬಿ.ಎಂ.ಅಬ್ಬಾಸ್ ಅಲಿ, ಮಂಜು ವಿಟ್ಲ, ರವೀಂದ್ರ ಕುಕ್ಕಾಜೆ, ಸಾಯಿರಾಂ ನಾಯಕ್, ಉಮೇಶ್ ಕುಮಾರ್ ವೈ, ಲತೀಫ್ ನೇರಳಕಟ್ಟೆ ಹಾಗೂ ಗೌರವ ಮಾಧ್ಯಮ ಪ್ರತಿನಿಧಿಯಾಗಿ ಜಯಾನಂದ ಪೆರಾಜೆ ಅವರನ್ನು ಆರಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ : ಕ.ಸಾ.ಪ ನೂತನ ಪದಾಧಿಕಾರಿಗಳ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*