ಬಂಟ್ವಾಳ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ 3200 ವಿದ್ಯಾರ್ಥಿಗಳಿಂದ ಸಾಮೂಹಿಕ ಸೂರ್ಯನಮಸ್ಕಾರ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಕಲ್ಲಡ್ಕ

ಬಂಟ್ವಾಳ: 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ 75 ಕೋಟಿ ಸೂರ್ಯನಮಸ್ಕಾರ ನಿಮಿತ್ತ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸೋಮವಾರ 3200 ವಿದ್ಯಾರ್ಥಿಗಳು ಸಾಮೂಹಿಕ ಸೂರ್ಯನಮಸ್ಕಾರದಲ್ಲಿ ಪಾಲ್ಗೊಂಡರು. ಸೂರ್ಯನ ಆಕಾರದಲ್ಲೇ ಸೇರಿದ ವಿದ್ಯಾರ್ಥಿಗಳು ಮಂತ್ರಸಹಿತ ನಮಸ್ಕಾರ ಮಾಡಿದರು. ಪ್ರಗತಿಪರ ಕೃಷಿಕರಾದ ಲಕ್ಷ್ಮೀನಾರಾಯಣ ಪರಾಡ್ಕರ್ ಧ್ವಜಾರೋಹಣಗೈದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಡಾ. ಕಮಲಾ ಪ್ರ.ಭಟ್, ಆಡಳಿತ ಮಂಡಳಿ ಸದಸ್ಯರು, ವಿಭಾಗ ಪ್ರಮುಖರು, ಶಿಕ್ಷಕರು, ಶಿಕ್ಷಕೇತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.