ಬಂಟ್ವಾಳ

ದೇವಂದಬೆಟ್ಟು ಬ್ರಹ್ಮಕಲಶೋತ್ಸವ: ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭ, ಕುಟುಂಬ ಸಮಾವೇಶ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬುಧವಾರ ರಾತ್ರಿ ನಡೆದ ನಾಟಕದ ದೃಶ್ಯ

ಬಂಟ್ವಾಳ: ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಆರಂಭಗೊಂಡಿದೆ. ಮಂಗಳವಾರ ವೈಭವದ ಹೊರೆಕಾಣಿಕೆ ಮೆರವಣಿಗೆ ನಡೆದರೆ, ಬುಧವಾರ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ಸಂಜೆ ನಾಟಕ ಓಂ ಶ್ರೀ ಕಲಾವಿದೆರ್ ಬಿ.ಸಿ.ರೋಡ್ ವತಿಯಿಂದ ಅಂದ್ ಂಡ ಅಂದ್ ಪನ್ಲೆ ಪ್ರದರ್ಶನಗೊಂಡಿತು.  ಬೆಳಗ್ಗೆ ಗಣಪತಿ ಹೋಮ, ಅಂಕುರ ಪೂಜೆ, ಬಿಂಬಶುದ್ಧಿ ಸಹಿತ ವಿವಿಧ ಕಾರ್ಯಕ್ರಮಗಳು, ಮಧ್ಯಾಹ್ನ, ರಾತ್ರಿ ಅನ್ನಸಂತರ್ಪಣೆ, ರಾತ್ರಿ ದುರ್ಗಾನಮಸ್ಕಾರ ಪೂಜೆ ನಡೆಯಿತು. ಆರೆಸ್ಸೆಸ್ ನ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರು ಕುಟುಂಬ ಸಮಾವೇಶದಲ್ಲಿ ಉಪನ್ಯಾಸ ನೀಡಿದರು. ಆರೆಸ್ಸೆಸ್ ಪುತ್ತೂರು ಜಿಲ್ಲಾ ಸಂಘ ಚಾಲಕ್ ಕೊಡ್ಮಣ್ ಕಾಂತಪ್ಪ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ನವೀನ್ ಚಂದ್ರ ಶೆಟ್ಟಿ ವೇದಿಕೆಯಲ್ಲಿದ್ದರು.

ಜಾಹೀರಾತು

ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಲಾಯಿತು. ಭಜನೆ, ಗೊಂಬೆ ಕುಣಿತ, ಬಣ್ಣದ ಕೊಡೆಗಳು, ಕಲಶ ಹೊತ್ತ ಮಹಿಳೆಯರ ತಂಡ ಮೆರವಣಿಗೆಗೆ ವಿಶೇಷ ಮೆರುಗು ನೀಡಿದರು. ಬಿ.ಸಿ.ರೋಡಿನಿಂದ ದೇವಂದಬೆಟ್ಟು ದೇವಸ್ಥಾನದವರೆಗೆ ಸುಮಾರು ೮ ಕಿ.ಮೀ ದೂರವನ್ನು ಭಕ್ತರು ಪಾದಯಾತ್ರೆಯ ಮೂಲಕ ಕ್ರಮಿಸಿದರು.  ೩ ಸಾವಿರಕ್ಕಿಂತಲೂ ಅಧಿಕ ಮಂದಿ ಮೆರವಣಿಗೆಯಲ್ಲಿ ಪಾಲ್ಗೊಂಡು ಅದ್ಧೂರಿಯ ಮೆರವಣಿಗೆಗೆ ಸಾಕ್ಷಿಯಾದರು.  ಈ ಸಂದರ್ಭ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಪೊಳಲಿ ಗಿರಿಪ್ರಕಾಶ್ ತಂತ್ರಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ರಮೇಶ ಉಪಾಧ್ಯಾಯ ನೆತ್ತರಕೆರೆ, ಪ್ರಧಾನ ಕಾರ್ಯದರ್ಶಿ ದಾಮೋದರ ನೆತ್ತರಕೆರೆ, ಮಾಜಿ ಸಚಿವ ಬಿ.ರಮನಾಥ ರೈ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ, ಗೌರವಾಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಮುಂಡಾಜೆಗುತ್ತು, ಪ್ರಧಾನ ಕಾರ್ಯದರ್ಶಿ ಗಣೇಶ್ ಸುವರ್ಣ ತುಂಬೆ, ಸಂಚಾಲಕ ತಾರನಾಥ ಕೊಟ್ಟಾರಿ, ಕೋಶಾಧಿಕಾರಿ ಕವಿರಾಜ್ ಚಂದ್ರಿಗೆ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ,  ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷರಾದ ರಾಮಕೃಷ್ಣ  ಆಳ್ವ ಪೊನ್ನೊಡಿ, ದೇವಳ ಅರ್ಚಕ ರಾಮಕೃಷ್ಣ ಕಡಂಬಳಿತ್ತಾಯ ಪ್ರಮುಖರಾದ ಸೋಮಪ್ಪ ಕೋಟ್ಯಾನ್, ದೇವಪ್ಪ ಪೂಜಾರಿ, ಪ್ರಕಾಶ್ ಅಂಚನ್, ಪ್ರಕಾಶ್ ಶೆಟ್ಟಿ ಶ್ರೀ ಶೈಲ, ಮಧುಸೂದನ್ ಶೆಣೈ, ದಾಮೋದರ್ ನೆತ್ತರಕೆರೆ, ಮನೋಜ್ ವಳವೂರು,  ಪುರುಷೋತ್ತಮ ಕೊಟ್ಟಾರಿ, ಮನೋಹರ್ ಕಂಜತ್ತೂರು, ಪುಷ್ಪರಾಜ್ ಶೆಟ್ಟಿ, ಪ್ರಮೋದ್ ಕುಮಾರ್ ಅಜ್ಜಿಬೆಟ್ಟು, ಪ್ರದೀಪ್  ಅಜ್ಜಿಬೆಟ್ಟು, ಹರಿಪ್ರಸಾದ್ ,  ಕಳ್ಳಿಗೆ ಗ್ರಾ.ಪಂ.ಅಧ್ಯಕ್ಷೆ ಯಶೋಧ ಜಾರಂದಗುಡ್ಡೆ,ವಿವಿಧ ಸಮಿತಿ ಪದಾಧಿಕಾರಿಗಳಾದ ಭುವನೇಶ್ ಪಚ್ಚಿನಡ್ಕ,  ನವೀನ್ ಚಂದ್ರ ಶೆಟ್ಟಿ ಮುಂಡಾಜೆಗುತ್ತು,, ಗಣೇಶ್ ಸುವರ್ಣ ತುಂಬೆ, ಯೋಗೀಶ್ ಕುಮಾರ್ ದರಿಬಾಗಿಲು,ದೇವಿಪ್ರಸಾದ್ ಹಾಗೂ ವ್ಯವಸ್ಥಾಪನ ಸಮಿತಿ ಸದಸ್ಯರು ಮೊದಲಾದವರಿದ್ದರು

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…

4 hours ago