ಬಂಟ್ವಾಳ

ದೇವಂದಬೆಟ್ಟು ಬ್ರಹ್ಮಕಲಶೋತ್ಸವ: ಉತ್ಸವದ ಮಹತ್ವದ ಕುರಿತು ಪಂಜ ಭಾಸ್ಕರ ಭಟ್ ಉಪನ್ಯಾಸ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳ: ದೇವಂದಬೆಟ್ಟುವಿನಲ್ಲಿ ನಡೆಯುತ್ತಿರುವ ಶ್ರೀ ಲಕ್ಷ್ಮೀವಿಷ್ಣಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಗುರುವಾರ ಬ್ರಹ್ಮಕಲಶೋತ್ಸವದ ಮಹತ್ವದ ಕುರಿತು ಹಿರಿಯ ವಿದ್ವಾಂಸ ಪಂಜ ಭಾಸ್ಕರ ಭಟ್ ಉಪನ್ಯಾಸ ನೀಡಿದರು.

ಪ್ರತಿಮೆಯನ್ನು ಮಾಧ್ಯಮವಾಗಿಸಿ ದೇವಾಲಯ ನಿರ್ಮಿಸಿ ಭಗವಂತನ ಆರಾಧಿಸುವ ಮೂಲಕ ಜೀವನದಲ್ಲಿ ಧನ್ಯತೆಯ ಭಾವವನ್ನು ಪಡೆಯಬಹುದು. ದೇವರ ಬಿಂಬವನ್ನು ಶಾಸ್ತ್ರೀಯವಾಗಿ ಸಂಯೋಜಿಸಿ ವೈಜ್ಞಾನಿಕವಾಗಿ ದೇವಸ್ಥಾನದ ವ್ಯವಸ್ಥೆ ರೂಪಿಸುವ ಮೂಲಕ ದೇವರ ಸಾನಿಧ್ಯ ಪರಿಪೂರ್ಣತೆಯನ್ನು ಹೊಂದುವ ವ್ಯವಸ್ಥೆಯನ್ನು ಬ್ರಹ್ಮಕಲಶ ಎಂದು ಕರೆಯಲಾಗುತ್ತದೆ. ದೇವರ ನಾಮ ಸ್ಮರಣೆಯಿಂದ ಜೀವನಾದರ್ಶಗಳು, ಮಾನಸಿಕ ಸಾಧನಾ ಪ್ರೇರಣೆಗಳು ಲಭಿಸುತ್ತದೆ ಎಂದು ಅವರು ನುಡಿದರು. ಬ್ರಹ್ಮಕಲಶೋತ್ಸವ ಸಮಿತಿ ಗೌರವ ಸಲಹೆಗಾರರಾದ ಪದ್ಮನಾಭ ರಾವ್ ಕನಪಾಡಿ, ಸಂಚಾಲಕ ತೇವು ತಾರಾನಾಥ ಕೊಟ್ಟಾರಿ ಫರಂಗಿಪೇಟೆ ಉಪಸ್ಥಿತರಿದ್ದರು. ಸಂತೋಷ್ ಕೋಟ್ಯಾನ್ ತುಂಬೆ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.